Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:5 - ಪರಿಶುದ್ದ ಬೈಬಲ್‌

5 ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೆ ರಾಜನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ರಾಜ್ಯಭಾರ ನೀತಿಯಾಧಾರದಿಂದ ಸುಸ್ಥಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:5
13 ತಿಳಿವುಗಳ ಹೋಲಿಕೆ  

ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು.


ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ.


ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದುಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು.


ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಬಡಜನರಿಗೆ ನ್ಯಾಯದೊರಕಿಸುವ ರಾಜನು ಬಹುಕಾಲ ಆಳುವನು.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ, ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.


ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.


ಆದರೆ ಯೆಹೋವನು ನನ್ನನ್ನು ಆಶೀರ್ವದಿಸುತ್ತಾನೆ. ಆತನು ದಾವೀದನ ಸಿಂಹಾಸನವನ್ನು ಎಂದೆಂದಿಗೂ ಸಂರಕ್ಷಿಸುವನು” ಎಂದು ಹೇಳಿದನು.


ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು