Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:8 - ಪರಿಶುದ್ದ ಬೈಬಲ್‌

8 ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ; ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:8
12 ತಿಳಿವುಗಳ ಹೋಲಿಕೆ  

“ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.


ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ರಂಧ್ರಕ್ಕೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.


ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ.


ಮೂಢನು ವಾದಕ್ಕೆ ಇಳಿಯುತ್ತಾನೆ; ಅವನ ಮಾತುಗಳು ಜಗಳವನ್ನು ಎಬ್ಬಿಸಿ, ಏಟಿಗಾಗಿ ಕೇಳಿಕೊಳ್ಳುತ್ತವೆ.


ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಅಬ್ನೇರನು ಯೋವಾಬನಿಗೆ, “ನಾವು ಎಂದೆಂದಿಗೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.


ಜೀವಂತವಾಗಿರುವ ಮಗುವನ್ನು ಕತ್ತರಿಸಿ ಅವರಿಬ್ಬರಿಗೂ ಅರ್ಧರ್ಧ ಮಗುವನ್ನು ಕೊಟ್ಟುಬಿಡಿ” ಎಂದು ಆಜ್ಞಾಪಿಸಿದನು.


ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು