Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:23 - ಪರಿಶುದ್ದ ಬೈಬಲ್‌

23 ನಿನ್ನ ಕುರಿಗಳನ್ನೂ ಪಶುಗಳನ್ನೂ ಎಚ್ಚರಿಕೆಯಿಂದ ಕಾಯ್ದುಕೊಂಡಿರು; ನಿನ್ನಿಂದಾದಷ್ಟು ಮಟ್ಟಿಗೆ ಅವುಗಳ ಮೇಲೆ ಗಮನವಿಟ್ಟು ನೋಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿನ್ನ ಹಿಂಡುಗಳ ಪರಿಸ್ಥಿತಿಯನ್ನು ತಿಳಿದುಕೊ; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು; ನಿನ್ನ ಮಂದೆಗಳ ಮೇಲೆ ಮನಸ್ಸಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:23
16 ತಿಳಿವುಗಳ ಹೋಲಿಕೆ  

ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.


ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.


ಆದರೆ ಯಾಕೋಬನು ಅವನಿಗೆ, “ನನ್ನ ಮಕ್ಕಳು ಬಲಹೀನರೆಂದು ನಿನಗೆ ಗೊತ್ತಿದೆ. ನಾನು ನನ್ನ ದನಕುರಿಗಳನ್ನೂ ಅವುಗಳ ಮರಿಗಳನ್ನೂ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಒಂದೇ ದಿನದಲ್ಲಿ ಬಹುದೂರದವರೆಗೆ ಎಡಬಿಡದೆ ನಡೆಸಿಕೊಂಡು ಹೋದರೆ, ಎಲ್ಲಾ ಪಶುಗಳು ಸತ್ತುಹೋಗುತ್ತವೆ.


ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;


ಕಾವಲುಗಾರನು ಕುರುಬನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಕುರುಬನು ತನ್ನ ಸ್ವಂತ ಕುರಿಗಳನ್ನು ಹೆಸರು ಹಿಡಿದು ಕರೆದು ಹೊರಗೆ ಬಿಡುತ್ತಾನೆ.


“ನೀವು ನನ್ನ ಕುರಿಗಳು, ಹಸಿರುಗಾವಲಿನ ಕುರಿಗಳು. ನೀವು ಮಾನವರಷ್ಟೇ. ನಾನು ನಿಮ್ಮ ದೇವರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.


ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.


ಫರೋಹನು ತನ್ನ ಮನೆಗೆ ಹೊರಟುಹೋದನು. ಮೋಶೆ ಆರೋನರು ಮಾಡಿದ ಮಹತ್ಕಾರ್ಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.


ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.


“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.


ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು