Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:24 - ಪರಿಶುದ್ದ ಬೈಬಲ್‌

24 ಐಶ್ವರ್ಯ ಸದಾಕಾಲ ಇರುವಂಥದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸಂಪತ್ತು ಶಾಶ್ವತವಾಗಿರುವದಿಲ್ಲವಷ್ಟೆ; ಕಿರೀಟವು ತಲತಲಾಂತರಗಳವರೆಗೆ ನಿಂತೀತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:24
15 ತಿಳಿವುಗಳ ಹೋಲಿಕೆ  

ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಐಶ್ವರ್ಯವಂತನಾಗಿರುವ ವಿಶ್ವಾಸಿಯೂ ಹೆಮ್ಮೆಪಡಬೇಕು. ಏಕೆಂದರೆ ಆತ್ಮಿಕ ವಿಷಯದಲ್ಲಿ ಅವನಿಗಿರುವ ಬಡತನವನ್ನು ದೇವರು ಅವನಿಗೆ ತೋರಿಸಿಕೊಟ್ಟಿದ್ದಾನೆ. ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸುವನು.


ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”


ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು.


ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”


ದೇವರು ನನ್ನ ಗೌರವವನ್ನು ತೆಗೆದುಹಾಕಿದ್ದಾನೆ. ಆತನು ನನ್ನ ತಲೆಯಿಂದ ಕಿರೀಟವನ್ನು ತೆಗೆದುಹಾಕಿದ್ದಾನೆ.


ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.


ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.


ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ.


ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು