Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:1 - ಪರಿಶುದ್ದ ಬೈಬಲ್‌

1 ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:1
26 ತಿಳಿವುಗಳ ಹೋಲಿಕೆ  

“ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು.


ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.


ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.


ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.


ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.


ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಅವರು ಅರಾಮ್ಯರ ಸೇನೆಗಾಗಿ ಹುಡುಕಿಕೊಂಡು ಜೋರ್ಡನ್ ನದಿಯವರೆಗೂ ಹೋದರು. ರಸ್ತೆಯ ದಾರಿಯಲ್ಲೆಲ್ಲಾ ಬಟ್ಟೆಗಳು ಮತ್ತು ಆಯುಧಗಳು ಬಿದ್ದಿದ್ದವು. ಅರಾಮ್ಯರು ಆತುರಾತುರವಾಗಿ ಹೋಗುವಾಗ ಅವುಗಳನ್ನೆಲ್ಲಾ ಬಿಸಾಡಿ ಹೋಗಿದ್ದರು. ಸಂದೇಶಕರು ಸಮಾರ್ಯಕ್ಕೆ ಹಿಂದಿರುಗಿ ಬಂದು ರಾಜನಿಗೆ ವಿಷಯವನ್ನು ಹೇಳಿದರು.


ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.


ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.


ನಿನ್ನ ಇನ್ನಿತರ ಆಡುಗಳು ನಿನಗೆ ಬೇಕಾದಷ್ಟು ಹಾಲನ್ನು ಕೊಡುತ್ತವೆ. ಅದರಿಂದ ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸೇವಕಿಯರಿಗೂ ಬೇಕಾದಷ್ಟು ಆಹಾರವಿರುವುದು.


ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ಆಗ ಅದೋನೀಯನ ಅತಿಥಿಗಳೆಲ್ಲರೂ ಭಯಗೊಂಡು ಓಡಿಹೋದರು.


ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.


ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೋ ಸಿಕ್ಕಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು