Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:11 - ಪರಿಶುದ್ದ ಬೈಬಲ್‌

11 ಐಶ್ವರ್ಯವಂತನು ತಾನೇ ಬುದ್ಧಿವಂತನೆಂದು ಭಾವಿಸುತ್ತಾನೆ. ವಿವೇಕಿಯಾದ ಬಡವನಾದರೋ ಸತ್ಯವನ್ನು ಕಾಣಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:11
18 ತಿಳಿವುಗಳ ಹೋಲಿಕೆ  

ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು.


ಮೊದಲು ತನ್ನ ವಾದವನ್ನು ಮಂಡಿಸುವವನು ಯಾವಾಗಲೂ ನೀತಿವಂತನಂತೆ ಕಾಣುತ್ತಾನೆ. ಆದರೆ ಪ್ರತಿವಾದಿ ಎದ್ದಮೇಲೆ ಅವನ ನಿಜಪರೀಕ್ಷೆ ಆಗುವುದು.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ಅವರು ತಾವು ತುಂಬಾ ಬುದ್ಧಿವಂತರೆಂದೂ ಜ್ಞಾನಿಗಳೆಂದೂ ಹೇಳಿಕೊಳ್ಳುವರು.


ಮೂಢನಿಗೆ ಅವನ ಮೂಢತನದ ಮಟ್ಟದಲ್ಲಿ ಉತ್ತರಿಸು; ಇಲ್ಲವಾದರೆ ಅವನು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಳ್ಳುವನು.


ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ.


ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು.


ಐಶ್ವರ್ಯವು ತಮ್ಮನ್ನು ಬಲವಾದ ಕೋಟೆಯಂತೆ ಕಾಪಾಡುತ್ತದೆ ಎಂಬುದು ಐಶ್ವರ್ಯವಂತರ ಭಾವನೆ.


ವೃದ್ದರು ಮಾತ್ರ ಜ್ಞಾನಿಗಳಲ್ಲ, ಕೇವಲ ವಯಸ್ಸಾದವರು ಮಾತ್ರ ಯಾವುದು ಸರಿ ಎಂಬುದನ್ನು ಅರ್ಥಮಾಡಿಕೊಳ್ಳುವವರಲ್ಲ.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು