Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:15 - ಪರಿಶುದ್ದ ಬೈಬಲ್‌

15 ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:15
19 ತಿಳಿವುಗಳ ಹೋಲಿಕೆ  

ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ರಾಜನ ಕೋಪವು ಸಿಂಹದ ಘರ್ಜನೆಯಂತಿದೆ. ರಾಜನನ್ನು ಕೋಪಗೊಳಿಸಿದರೆ ಪ್ರಾಣಕ್ಕೆ ಹಾನಿ.


ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.


ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”


ಎಫ್ರಾಯೀಮ್ ಶಿಕ್ಷಿಸಲ್ಪಡುವನು. ಅವನು ದ್ರಾಕ್ಷಿಹಣ್ಣಿನಂತೆ ನಜ್ಜುಗುಜ್ಜಾಗುವನು. ಕಾರಣವೇನೆಂದರೆ, ಅವನು ಹೊಲಸನ್ನು ಹಿಂಬಾಲಿಸಲು ತೀರ್ಮಾನಿಸಿದ್ದಾನೆ.


ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.


ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.


ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.


ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.


ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.


ಯೆಹೋವನು ದುಷ್ಟರ ಕೋಲನ್ನೂ ಅರಸನ ರಾಜದಂಡವನ್ನೂ ಮುರಿದುಹಾಕಿದನು. ಅವನ ಅಧಿಕಾರವನ್ನು ತೆಗೆದುಹಾಕಿದನು.


ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ಆ ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ.


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು