Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:17 - ಪರಿಶುದ್ದ ಬೈಬಲ್‌

17 ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:17
16 ತಿಳಿವುಗಳ ಹೋಲಿಕೆ  

“ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.


ಇದಲ್ಲದೆ ಯೆಹೋವನು, ‘ನಿನ್ನ ಪತ್ನಿಯಾದ ಈಜೆಬೆಲಳ ದೇಹವನ್ನು, ಇಜ್ರೇಲ್ ನಗರದಲ್ಲಿ ನಾಯಿಗಳು ತಿನ್ನುತ್ತವೆ,


ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.


ನೆತನ್ಯನ ಮಗನಾದ ಇಷ್ಮಾಯೇಲನು ಮತ್ತು ಅವನ ಎಂಟು ಜನ ಸಂಗಡಿಗರು ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರ ಮೊರೆಹೊಕ್ಕರು.


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


“ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ, ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ


ಅಬ್ಷಾಲೋಮನು ಓಡಿಹೋದನು. ಆ ನಗರದ ಗೋಡೆಯ ಮೇಲೆ ಒಬ್ಬ ಕಾವಲುಗಾರನು ನಿಂತಿದ್ದನು. ಬೆಟ್ಟದ ಬೇರೊಂದು ಕಡೆಯಿಂದ ಅಂದರೆ ಹೋರೋನಿನ ಮಾರ್ಗವಾಗಿ ಅನೇಕ ಜನರು ಬರುತ್ತಿರುವುದನ್ನು ಅವನು ನೋಡಿದನು.


ಯೋವಾಬನೊಂದಿಗೆ ಹತ್ತು ಮಂದಿ ಯುವಕರು ಅವನಿಗೆ ಯುದ್ಧದಲ್ಲಿ ಸಹಾಯ ಮಾಡಿದರು. ಈ ಹತ್ತು ಜನರೂ ಅಬ್ಷಾಲೋಮನನ್ನು ಸುತ್ತುವರಿದು ಅವನನ್ನು ಕೊಂದರು.


ಯೋವಾಬನು ಯೆಹೋವನ ಗುಡಾರದಲ್ಲಿ ಯಜ್ಞವೇದಿಕೆಯ ಹತ್ತಿರ ಇದ್ದಾನೆಂದು ಯಾರೋ ಒಬ್ಬನು ರಾಜನಾದ ಸೊಲೊಮೋನನಿಗೆ ತಿಳಿಸಿದನು. ಆದ್ದರಿಂದ ಸೊಲೊಮೋನನು ಬೆನಾಯನಿಗೆ, ಹೋಗಿ ಅವನನ್ನು ಕೊಂದುಬಿಡುವಂತೆ ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು