Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:8 - ಪರಿಶುದ್ದ ಬೈಬಲ್‌

8 ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:8
13 ತಿಳಿವುಗಳ ಹೋಲಿಕೆ  

ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ.


ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.


“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.


ಅವನು ಕರುಣೆಯಿಲ್ಲದೆ ಇಂತಹ ಕೆಟ್ಟಕಾರ್ಯವನ್ನು ಮಾಡಿದ್ದಕ್ಕಾಗಿ ಕುರಿಮರಿಯ ಬೆಲೆಯ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು” ಎಂದು ಹೇಳಿದನು.


ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು. ರಾಜನು ಅವರ ಪ್ರಾಣಗಳನ್ನು ಕಾಪಾಡುವನು.


ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು