Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:13 - ಪರಿಶುದ್ದ ಬೈಬಲ್‌

13 ಒಂದು ರೀತಿಯಲ್ಲಿ ಬಡವನಿಗೂ ಅವನನ್ನು ಕುಗ್ಗಿಸುವವನಿಗೂ ವ್ಯತ್ಯಾಸವಿಲ್ಲ; ಅವರಿಬ್ಬರಿಗೂ ಜೀವಕೊಟ್ಟಾತನು ಯೆಹೋವನೇ; ಅವರಿಬ್ಬರನ್ನು ಸೃಷ್ಟಿಮಾಡಿದವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಲಿತನೂ, ದಬ್ಬಾಳಿಕೆ ನಡೆಸುವವನೂ ಸ್ಥಿತಿಯಲ್ಲಿ ಎದುರುಬದುರು; ಆದರೆ ಸರ್ವೇಶ್ವರನೆ ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಗ್ಗುವವನು ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ; ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:13
10 ತಿಳಿವುಗಳ ಹೋಲಿಕೆ  

ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.


ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ.


ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!


ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.


ಯೇಸು ಹೋಗುತ್ತಿರುವಾಗ, ಮತ್ತಾಯ ಎಂಬ ವ್ಯಕ್ತಿಯನ್ನು ಕಂಡನು. ಮತ್ತಾಯನು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಅಂದನು. ಆಗ ಮತ್ತಾಯನು ಎದ್ದು ಯೇಸುವನ್ನು ಹಿಂಬಾಲಿಸಿದನು.


“ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು