Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:14 - ಪರಿಶುದ್ದ ಬೈಬಲ್‌

14 ಬಡಜನರಿಗೆ ನ್ಯಾಯದೊರಕಿಸುವ ರಾಜನು ಬಹುಕಾಲ ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಡವರನ್ನು ನ್ಯಾಯವಾಗಿ ಆಳುವ ರಾಜನ ಸಿಂಹಾಸನವು ಶಾಶ್ವತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:14
18 ತಿಳಿವುಗಳ ಹೋಲಿಕೆ  

ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.


ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದುಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು.


ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.


ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.


ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:


ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು