Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:18 - ಪರಿಶುದ್ದ ಬೈಬಲ್‌

18 ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವದರ್ಶಕರಿಲ್ಲದಿರುವಲ್ಲಿ ಜನರು ಅಂಕೆಮೀರುವರು; ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:18
21 ತಿಳಿವುಗಳ ಹೋಲಿಕೆ  

ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.


ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


ಆಜ್ಞೆಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ ನಡತೆಯ ಬಗ್ಗೆ ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು.


ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.


ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.


ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.


ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!


ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.


ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.


ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.


“ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.


ನೀನು ಸೇವಕನಿಗೆ ಕೇವಲ ಮಾತಿನಿಂದ ಹೇಳಿದರೆ ಅವನು ಪಾಠವನ್ನು ಕಲಿತುಕೊಳ್ಳುವುದಿಲ್ಲ. ಅವನು ನಿನ್ನ ಮಾತುಗಳನ್ನು ಅರ್ಥಮಾಡಿಕೊಂಡರೂ ವಿಧೇಯನಾಗುವುದಿಲ್ಲ.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು