Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:5 - ಪರಿಶುದ್ದ ಬೈಬಲ್‌

5 ನೆರೆಯವನ ಮುಖಸ್ತುತಿ ಮಾಡುವವನು ಅವನ ಕಾಲಿಗೆ ಬಲೆಯನ್ನು ಒಡ್ಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೆರೆಯವನೊಂದಿಗೆ ವಂಚಿಸುವ ಸವಿನುಡಿಗಳನ್ನಾಡುವವನು ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:5
18 ತಿಳಿವುಗಳ ಹೋಲಿಕೆ  

“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ.


‘ಮನುಷ್ಯನು ತನ್ನ ಸ್ನೇಹಿತರಿಗೆ ಸಹಾಯಮಾಡಲು ತನ್ನ ಮಕ್ಕಳನ್ನೇ ಅಲಕ್ಷಿಸುತ್ತಾನೆ’ ಎಂಬ ಗಾದೆಯಿದೆ. ಆದರೆ ಈಗ ನನ್ನ ಸ್ನೇಹಿತರು ನನಗೆ ವಿರೋಧವಾಗಿ ಎದ್ದಿದ್ದಾರೆ.


ನಿಮ್ಮ ಬಗ್ಗೆ ಒಳ್ಳೆಯದನ್ನು ಹೇಳಿ ನಿಮ್ಮನ್ನು ಮರುಳು ಮಾಡಬೇಕೆಂದು ನಾವೆಂದೂ ಪ್ರಯತ್ನಿಸಿಲ್ಲವೆಂಬುದು ನಿಮಗೆ ತಿಳಿದಿದೆ. ನಾವು ನಿಮ್ಮ ಹಣವನ್ನು ಕಸಿದುಕೊಳ್ಳಲು ಪ್ರಯತ್ನಿಸಿಲ್ಲ; ನಮ್ಮ ಸ್ವಾರ್ಥವನ್ನು ಮರೆಮಾಡಿಕೊಂಡು ವೇಶಧಾರಿಗಳಾಗಿರಲಿಲ್ಲ. ಇದು ನಿಜವೆಂಬುದು ದೇವರಿಗೆ ತಿಳಿದಿದೆ.


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಯೆಹೋವನು ಮೇಲಿನಿಂದ ಬೆಂಕಿಯನ್ನು ಕಳಿಸಿದ್ದಾನೆ. ಆ ಬೆಂಕಿ ನನ್ನ ಎಲುಬುಗಳ ಆಳಕ್ಕೆ ಇಳಿದುಹೋಗಿದೆ. ಆತನು ನನ್ನ ಪಾದಗಳಿಗೆ ಬಲೆಯನ್ನು ಒಡ್ಡಿದ್ದಾನೆ. ಆತನು ನನ್ನನ್ನು ಸುತ್ತಲು ತಿರುಗಿಸಿದ್ದಾನೆ. ಆತನು ನನ್ನನ್ನು ಹಾಳುಭೂಮಿಯನ್ನಾಗಿ ಮಾಡಿದ್ದಾನೆ. ನಾನು ಸದಾ ಬಳಲುತ್ತಿದ್ದೇನೆ.


ಸುಳ್ಳುಗಾರನು ತಾನು ಕೇಡುಮಾಡಲಿರುವ ಜನರನ್ನು ದ್ವೇಷಿಸುವನು. ಕಪಟದ ಸಂಗತಿಗಳನ್ನು ಹೇಳುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ಬೇರೆಯವರ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುವವನನ್ನು ನಂಬಬೇಡ; ಅತಿಯಾಗಿ ಮಾತಾಡುವವನ ಸ್ನೇಹಿತನೂ ಆಗಬೇಡ.


ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.


ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ.


ಪಕ್ಷಿಗಳ ಕಣ್ಣೆದುರಿನಲ್ಲಿ ಬಲೆಹಾಕುವುದರಿಂದ ಪ್ರಯೋಜನವೇನೂ ಇಲ್ಲ.


ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ.


ಗದರಿಸುವವನು ಸ್ವಲ್ಪಕಾಲದ ನಂತರ ಮುಖಸ್ತುತಿ ಮಾಡುವವನಿಗಿಂತಲೂ ಹೆಚ್ಚಾಗಿ ಗೌರವಿಸಲ್ಪಡುವನು.


ಸೌಲನ ಅಧಿಕಾರಿಗಳು ದಾವೀದನಿಗೆ ಆ ವಿಚಾರಗಳನ್ನು ತಿಳಿಸಿದರು. ಆದರೆ ದಾವೀದನು, “ರಾಜನ ಅಳಿಯನಾಗುವುದು ಸುಲಭವೆಂದು ನೀವು ತಿಳಿದಿರುವಿರಾ? ರಾಜನ ಮಗಳಿಗೆ ಕೊಡಲು ನನ್ನ ಹತ್ತಿರ ಹಣವೇ ಇಲ್ಲ! ನಾನು ಕೇವಲ ಬಡವ, ಸಾಮಾನ್ಯ ಮನುಷ್ಯ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು