Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:24 - ಪರಿಶುದ್ದ ಬೈಬಲ್‌

24 ಆಗ ನೀನು ನಿರ್ಭಯದಿಂದ ಮಲಗಿಕೊಂಡು ಸುಖವಾಗಿ ನಿದ್ರಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮಲಗುವಾಗ ನಿನಗೆ ಹೆದರಿಕೆಯಿರದು, ಮಲಗಿದ ಮೇಲೆ ಸುಖನಿದ್ರೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ಮಲಗುವಾಗ ಹೆದರಿಕೆ ಇರುವದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:24
21 ತಿಳಿವುಗಳ ಹೋಲಿಕೆ  

ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.


ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.


ನೀನು ಹೋಗುವಲ್ಲೆಲ್ಲಾ ಅವರ ಉಪದೇಶಗಳು ನಿನ್ನನ್ನು ನಡೆಸುತ್ತವೆ. ನೀನು ಮಲಗಿರುವಾಗಲೂ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಡನೆ ಮಾತಾಡಿ ನಿನಗೆ ಮಾರ್ಗದರ್ಶನ ನೀಡುತ್ತವೆ.


ಆಗ ನಾನು ಎಚ್ಚೆತ್ತು ಸುತ್ತಮುತ್ತಲು ನೋಡಿದೆ. ಅದೊಂದು ಬಹಳ ಹಿತಕರವಾದ ನಿದ್ರೆಯಾಗಿತ್ತು.


ಆಗ ನೀನು ಮಲಗಿ ವಿಶ್ರಮಿಸಿಕೊಳ್ಳುವೆ; ಯಾರೂ ನಿನಗೆ ಭಯ ಹುಟ್ಟಿಸುವುದಿಲ್ಲ. ಅನೇಕರು ನಿನ್ನ ಸಹಾಯಕ್ಕಾಗಿಯೇ ಕೇಳಿಕೊಳ್ಳುವರು.


ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆ. ಶತ್ರುಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.


ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.


ಹೌದು, ನಾನು ನನ್ನ ಮಂದೆಯನ್ನು ಮೇಯಿಸಿ ಅವುಗಳನ್ನು ವಿಶ್ರಾಂತಿಯ ಸ್ಥಳಕ್ಕೆ ನಡೆಸುವೆನು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.


ಅವನ ಮನಸ್ಸು ದೃಢವಾಗಿರುವುದರಿಂದ ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು.


ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”


ದಿನವೆಲ್ಲಾ ಪ್ರಯಾಸಪಟ್ಟು ದುಡಿಯುವವನು ಸಮಾಧಾನದಿಂದ ಮಲಗಿಕೊಳ್ಳುವನು. ಅವನಿಗೆ ತಿನ್ನಲು ಸ್ವಲ್ಪವೇ ಇರಲಿ ಅಥವಾ ಹೆಚ್ಚೇ ಇರಲಿ, ಅದು ಮುಖ್ಯವಲ್ಲ. ಐಶ್ವರ್ಯವಂತನಿಗಾದರೋ ತನ್ನ ಸಂಪತ್ತಿನ ಕುರಿತು ಚಿಂತಿಸುತ್ತಾ ನಿದ್ರಿಸಲಾರನು.


ಆದ್ದರಿಂದ ಯೆಹೋಷಾಫಾಟನ ರಾಜ್ಯದಲ್ಲಿ ಸಮಾಧಾನ ನೆಲೆಸಿತ್ತು. ಅವನ ಸುತ್ತಮುತ್ತಲೂ ಯೆಹೋವನು ಶಾಂತಿಯನ್ನು ಅನುಗ್ರಹಿಸಿದನು.


ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ.


ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.


ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.


ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.


“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.


ಹೊಲದಲ್ಲಿ ಬೆಳೆಯುವ ಮರಗಳು ಫಲವನ್ನಿಯುವವು. ಭೂಮಿಯು ಬೆಳೆಯನ್ನು ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವರ ಮೇಲಿರುವ ನೊಗಗಳನ್ನು ನಾನು ಮುರಿದುಬಿಡುವೆನು. ಅವರನ್ನು ಗುಲಾಮರನ್ನಾಗಿ ಮಾಡಿದ ದೇಶದವರ ಶಕ್ತಿಯನ್ನೆ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು