Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:25 - ಪರಿಶುದ್ದ ಬೈಬಲ್‌

25 ದುಷ್ಟರ ಮೇಲೆ ಇದ್ದಕ್ಕಿದ್ದಂತೆ ಬರುವ ಅಪಾಯಕ್ಕಾಗಲಿ ನಾಶನಕ್ಕಾಗಲಿ ಹೆದರಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಕಸ್ಮಿಕ ಅಪಾಯಕ್ಕೆ ನೀನು ಅಂಜಲಾರೆ, ದುರುಳರಿಗೆ ಬಂದೊದಗುವ ನಾಶಕ್ಕೆ ಹೆದರಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಫಕ್ಕನೆ ಬರುವ ಅಪಾಯಕ್ಕಾಗಲಿ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:25
22 ತಿಳಿವುಗಳ ಹೋಲಿಕೆ  

ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.


ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.


ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ.


ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.


ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.


ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.


ಯುದ್ಧಗಳ ಬಗ್ಗೆ ಮತ್ತು ದಂಗೆಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು.


“ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)


ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.


ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.


ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.


ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು