Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:32 - ಪರಿಶುದ್ದ ಬೈಬಲ್‌

32 ಯೆಹೋವನಿಗೆ ವಕ್ರಬುದ್ಧಿಯುಳ್ಳವರು ಅಸಹ್ಯ. ಆದರೆ ಆತನು ಯಥಾರ್ಥರೊಂದಿಗೆ ಸ್ನೇಹದಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:32
16 ತಿಳಿವುಗಳ ಹೋಲಿಕೆ  

ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ಕೆಡುಕರು ಯೆಹೋವನಿಗೆ ಅಸಹ್ಯರು. ಆದರೆ ಸನ್ಮಾರ್ಗಿಗಳು ಆತನ ಮೆಚ್ಚಿಕೆಗೆ ಪಾತ್ರರಾಗಿದ್ದಾರೆ.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ; ದುಷ್ಟರಿಗಾದರೋ ಶತ್ರುವಾಗಿರುವೆ.


ಆ ದಿನಗಳು ನನ್ನ ಜೀವಿತದ ಸುಗ್ಗಿಕಾಲವಾಗಿದ್ದವು; ಆ ದಿನಗಳಲ್ಲಿ ದೇವರ ಸ್ನೇಹವು ನನ್ನೊಂದಿಗೂ ನನ್ನ ಮನೆಯವರೊಂದಿಗೂ ಇತ್ತು.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ.


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


“ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ. ದೇವರ ದೃಷ್ಠಿಯಲ್ಲಿ ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು