Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:8 - ಪರಿಶುದ್ದ ಬೈಬಲ್‌

8 ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನಿಂದ ಕಪಟವನ್ನೂ ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:8
28 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ನಮ್ಮ ಅನುದಿನದ ಆಹಾರವನ್ನು ನಮಗೆ ದಯಪಾಲಿಸು.


ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು.


ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು.


ಆತನ ಆಜ್ಞೆಗಳನ್ನು ನಾನು ಮೀರಲೇ ಇಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಮೃಷ್ಟಾನ್ನಕ್ಕಿಂತಲೂ ಹೆಚ್ಚಾಗಿ ಪ್ರೀತಿಸಿದ್ದೇನೆ.


ನೀನು ಮೋಸದಿಂದ ಐಶ್ವರ್ಯವಂತನಾದರೆ, ಆ ಐಶ್ವರ್ಯವು ಬಹುಬೇಗನೆ ಇಲ್ಲವಾಗುತ್ತದೆ. ನಿನ್ನ ಐಶ್ವರ್ಯವು ನಿನ್ನನ್ನು ಮರಣಕ್ಕೆ ನಡೆಸುತ್ತದೆ.


ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.


ಕೇಡನ್ನು ಬಿತ್ತುವವನು ಕೇಡನ್ನು ಕೊಯ್ಯುವನು. ಅವನ ದುಷ್ಟಶಕ್ತಿಯು ನಾಶವಾಗುವುದು.


ಹೀಗೆ ರಾಜನಾದ ಎವೀಲ್ಮೆರೋದಕನ ಪಂಕ್ತಿಯಲ್ಲಿ ಯೆಹೋಯಾಖೀನನು ತನ್ನ ಉಳಿದ ಜೀವಿತದಲ್ಲಿ ಊಟಮಾಡಿದನು.


ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಆ ಜನರನ್ನು ನೋಡಿರಿ. ಜನರು ಹಗ್ಗಗಳಿಂದ ಗಾಡಿಯನ್ನು ಎಳೆದುಕೊಂಡು ಹೋಗುವಂತೆ ಅವರು ತಮ್ಮ ಪಾಪಗಳನ್ನು ಎಳೆದುಕೊಂಡು ಹೋಗುತ್ತಿದ್ದಾರೆ.


ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!


ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.


ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.


ಪ್ರತಿದಿನ ಬಾಬಿಲೋನಿನ ರಾಜನು ಯೆಹೋಯಾಖೀನನಿಗೆ ಭತ್ಯವನ್ನು ಕೊಡುತ್ತಿದ್ದನು. ಯೆಹೋಯಾಖೀನನು ಸಾಯುವವರೆಗೆ ಈ ಕ್ರಮ ಮುಂದುವರೆಯಿತು.


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.


ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.


ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತುಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವಲ್ಲೇ ಇರಿ” ಎಂದು ಹೇಳಿದನು.


ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,


ಬಳಿಕ ಯೇಸು ಸೇವಕರಿಗೆ, “ಈಗ ಸ್ವಲ್ಪ ನೀರನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದನು. ಅಂತೆಯೇ ಅವರು ಅದನ್ನು ತೆಗೆದುಕೊಂಡು ಹೋದರು.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.


ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು