Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:24 - ಪರಿಶುದ್ದ ಬೈಬಲ್‌

24 ಸತ್ಯವನ್ನು ಸೊಟ್ಟಗೆ ಮಾಡದಿರು; ಸುಳ್ಳನ್ನು ಹೇಳದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸು, ಕೆಟ್ಟನುಡಿಗಳನ್ನು ಬಾಯಿಂದ ದೂರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸೊಟ್ಟ ಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ತುಟಿಗಳ ವಕ್ರತೆಯನ್ನು ದೂರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ವಕ್ರಮಾತುಗಳನ್ನು ನಿನ್ನ ಬಾಯಿಂದ ತೊಲಗಿಸಿ; ಕೆಟ್ಟ ಮಾತುಗಳು ನಿನ್ನ ತುಟಿಗಳಿಂದ ದೂರವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:24
16 ತಿಳಿವುಗಳ ಹೋಲಿಕೆ  

ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


ನನ್ನ ಮಾತುಗಳು ನೀತಿಯ ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿ ಕಪಟವಾಗಲಿ ಇಲ್ಲವೇ ಇಲ್ಲ.


ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.


ಕೆಡುಕನೂ ನೀಚನೂ ಆಗಿರುವವನು ಸುಳ್ಳಾಡುತ್ತಾ ಅಡ್ಡಾಡುತ್ತಾನೆ.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಈಗಲಾದರೋ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ.


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ಕೆಡುಕನಿಗೆ ಲಾಭವೆಂದೂ ಆಗದು. ಸುಳ್ಳುಗಾರನಿಗೆ ತೊಂದರೆಯೇ ಗತಿ.


ನೀನು ಪಾಪವನ್ನು ಹಿಡಿದುಕೊಂಡಿದ್ದರೆ ಅದನ್ನು ನಿನ್ನಿಂದ ದೂರಮಾಡು. ದುಷ್ಟತನವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.


ಒಳ್ಳೆಯದನ್ನೇ ದೃಷ್ಟಿಸು; ನಿನ್ನ ನೋಟವನ್ನು ನಿನ್ನ ಗುರಿಯ ಮೇಲೆ ಕೇಂದ್ರೀಕರಿಸು.


ಒಳ್ಳೆಯವನು ಯೋಗ್ಯವಾದವುಗಳನ್ನು ಹೇಳುವನು. ಕೆಡುಕನು ಸುಳ್ಳನ್ನು ಮಾತ್ರ ಹೇಳುತ್ತಾನೆ.


ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು