Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:5 - ಪರಿಶುದ್ದ ಬೈಬಲ್‌

5 ಜ್ಞಾನವನ್ನು ಮತ್ತು ವಿವೇಕವನ್ನು ಪಡೆದುಕೋ! ನನ್ನ ಮಾತುಗಳನ್ನು ಮರೆಯಬೇಡ. ಯಾವಾಗಲೂ ನನ್ನ ಉಪದೇಶಗಳನ್ನು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಓರೆಯಾಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು; ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:5
17 ತಿಳಿವುಗಳ ಹೋಲಿಕೆ  

ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.


ಯೋಷೀಯನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನೇ ಮಾಡಿದನು. ಅವನು ತನ್ನ ಪೂರ್ವಿಕನಾದ ದಾವೀದನಂತೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅವನು ಒಳ್ಳೆಯ ಕಾರ್ಯಗಳನ್ನು ಮಾಡುವುದನ್ನು ಬಿಟ್ಟುಬಿಡಲಿಲ್ಲ.


ತನ್ನನ್ನು ಪ್ರೀತಿಸುವ ಪ್ರತಿಯೊಬ್ಬನು ಜ್ಞಾನಿಯಾಗಲು ಪ್ರಯಾಸಪಡುವನು; ಅಭಿವೃದ್ಧಿಗಾಗಿ ಇಷ್ಟಪಡುವವನು ತಿಳುವಳಿಕೆಯನ್ನು ಹೊಂದಿಕೊಳ್ಳಲು ಪ್ರಯತ್ನಿಸುವನು.


ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ನಾವು ನಿನಗೆ ವಿಮುಖರಾಗದೆ ನಿನ್ನನ್ನೇ ಹಿಂಬಾಲಿಸಿದೆವು.


ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.


ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.


ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.


ಅನೇಕ ವೈರಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನಾನಾದರೋ ನಿನ್ನ ಕಟ್ಟಳೆಗಳನ್ನು ಅನುಸರಿಸುತ್ತಲೇ ಇದ್ದೇನೆ.


ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. ನಾನಾದರೋ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು.


ಆತನ ಮಾರ್ಗದಲ್ಲೇ ನಾನು ನಡೆದಿದ್ದೇನೆ. ನಾನು ಓರೆಯಾಗದೆ ಆತನ ಮಾರ್ಗವನ್ನೇ ಅನುಸರಿಸಿದ್ದೇನೆ.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


“ಜ್ಞಾನವನ್ನು ಪಡೆಯಲು ನೀನು ನಿರ್ಧರಿಸಿದಾಗಲೇ ಜ್ಞಾನವು ನಿನ್ನಲ್ಲಿ ಆರಂಭವಾಗುತ್ತದೆ. ಆದ್ದರಿಂದ ವಿವೇಕವನ್ನು ಪಡೆಯಲು ನಿನಗಿರುವದನ್ನೆಲ್ಲಾ ಉಪಯೋಗಿಸು. ಆಗ ನೀನು ವಿವೇಕಿಯಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು