Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:22 - ಪರಿಶುದ್ದ ಬೈಬಲ್‌

22 ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:22
30 ತಿಳಿವುಗಳ ಹೋಲಿಕೆ  

ನೀತಿವಂತನು ಯಥಾರ್ಥನಾಗಿದ್ದರೆ ಅವನ ಜೀವನವು ಸರಾಗವಾಗಿರುವುದು. ಆದರೆ ಕೆಡುಕನು ತನ್ನ ಕೆಟ್ಟಕಾರ್ಯಗಳಿಂದ ನಾಶವಾಗುವನು.


ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ.


ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು.


ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ. ಕೆಡುಕರು ತಮ್ಮ ಮೋಸಕೃತ್ಯಗಳ ಮೂಲಕ ತಮ್ಮನ್ನೇ ನಾಶಮಾಡಿಕೊಳ್ಳುತ್ತಾರೆ.


ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.


ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾಮನು ನುಡಿದಂತೆಯೇ ಆಯಿತು.


ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.


ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.


ಅವನ ಸ್ವಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು.


ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.


ನೀತಿಯು ಯಥಾರ್ಥವಂತರನ್ನು ಕಾಪಾಡುತ್ತದೆ. ಆದರೆ ವಂಚಕರು ತಮ್ಮ ಆಸೆಗಳಿಂದಲೇ ಸಿಕ್ಕಿಬೀಳುವರು.


ಮನುಷ್ಯನು ತನ್ನ ಒಳ್ಳೆಯ ಮಾತುಗಳಿಗೆ ಪ್ರತಿಫಲವನ್ನು ಪಡೆಯುವನು. ಅದೇ ರೀತಿಯಲ್ಲಿ, ಅವನ ಕೆಲಸವು ಅವನಿಗೆ ಲಾಭವನ್ನು ಕೊಡುವುದು.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ಮೂಢನು ಮಾತಿನಲ್ಲಿ ತನ್ನನ್ನೇ ನಾಶಪಡಿಸಿಕೊಳ್ಳುವನು. ಅವನ ಮಾತುಗಳೇ ಅವನಿಗೆ ಬಲೆಯಾಗುತ್ತವೆ.


“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.


ಮತ್ತೊಬ್ಬನಿಗೆ ಬಲೆಹಾಕುವವನು ತನಗೇ ಬಲೆಹಾಕಿಕೊಳ್ಳುವನು. ಮತ್ತೊಬ್ಬನ ಮೇಲೆ ಬಂಡೆ ಉರುಳಿಸಲು ಪ್ರಯತ್ನಿಸುವವನು ಅದರಿಂದಲೇ ಜಜ್ಜಲ್ಪಡುವನು.


ಎಲ್ಲಾ ಜನಾಂಗಗಳವರಿಗೆ ಯೆಹೋವನ ದಿನವು ಬೇಗನೇ ಬರುವದು. ನೀನು ಬೇರೆಯವರಿಗೆ ಮಾಡಿದ ದುಷ್ಕೃತ್ಯಗಳನ್ನು ಅವರು ನಿನ್ನ ಮೇಲೆಯೇ ನಡೆಸುವರು. ಅದೇ ದುಷ್ಕೃತ್ಯಗಳು ನಿನ್ನ ತಲೆ ಮೇಲೆ ಬೀಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು