Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:16 - ಪರಿಶುದ್ದ ಬೈಬಲ್‌

16 ಯೆಹೋವನು ಈ ಆರು ವಸ್ತುಗಳನ್ನು ದ್ವೇಷಿಸುತ್ತಾನೆ, ಇಲ್ಲ, ಏಳು ವಸ್ತುಗಳನ್ನು ದ್ವೇಷಿಸುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16-19 ಸರ್ವೇಶ್ವರ ಹಗೆಮಾಡುವಂಥಹವು ಆರು: ಆತ ಖಂಡನೆ ಮಾಡುವಂಥಹವು ಏಳು: ಅಹಂಕಾರ ದೃಷ್ಟಿ, ಕಪಟವಾಡುವ ನಾಲಿಗೆ, ನಿರಪರಾಧಿಯನ್ನು ಕೊಲೆಮಾಡುವ ಕೈ, ದುರಾಲೋಚನೆಯನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತವಕಪಡುವ ಕಾಲು, ಅಸತ್ಯವನ್ನು ಉಸುರುವ ಸುಳ್ಳುಸಾಕ್ಷಿ, ಸೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಹಗೆಮಾಡುವ ವಸ್ತುಗಳು ಆರು ಇವೆ. ಹೌದು, ಏಳು ಆತನಿಗೆ ಅಸಹ್ಯಗಳಾಗಿ ತೋರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ; ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:16
34 ತಿಳಿವುಗಳ ಹೋಲಿಕೆ  

ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಕೆಡುಕರು ಯೆಹೋವನಿಗೆ ಅಸಹ್ಯರು. ಆದರೆ ಸನ್ಮಾರ್ಗಿಗಳು ಆತನ ಮೆಚ್ಚಿಕೆಗೆ ಪಾತ್ರರಾಗಿದ್ದಾರೆ.


ಯೆಹೋವನಿಗೆ ವಕ್ರಬುದ್ಧಿಯುಳ್ಳವರು ಅಸಹ್ಯ. ಆದರೆ ಆತನು ಯಥಾರ್ಥರೊಂದಿಗೆ ಸ್ನೇಹದಿಂದಿರುವನು.


ಮೋಸವುಳ್ಳ ತೂಕದ ಕಲ್ಲುಗಳನ್ನು ಉಪಯೋಗಿಸುವವರನ್ನು ದೇವರಾದ ಯೆಹೋವನು ದ್ವೇಷಿಸುತ್ತಾನೆ. ಹೌದು, ಆತನು ಮೋಸ ಮಾಡುವವರನ್ನು ದ್ವೇಷಿಸುತ್ತಾನೆ.


ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.


ಯೆಹೋವನು ಮೋಸದ ತಕ್ಕಡಿಗಳನ್ನು ದ್ವೇಷಿಸುತ್ತಾನೆ. ನ್ಯಾಯವಾದ ತಕ್ಕಡಿಗಳಾದರೋ ಆತನನ್ನು ಸಂತೋಷಗೊಳಿಸುತ್ತವೆ.


ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.


ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.


ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು:


ಯೆಹೋವನಿಗೆ ಅನ್ಯಾಯದ ಅಳತೆಮಾಪಕವು ಅಸಹ್ಯ; ಮೋಸದ ತಕ್ಕಡಿಗಳು ಅಪರಾಧ.


ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ಮೂರು ಪ್ರಾಣಿಗಳಿವೆ: ಅವು ನಡೆಯುವಾಗ ಗಂಭೀರತೆಯು ಎದ್ದುಕಾಣುತ್ತದೆ. ನಿಜವಾಗಿಯೂ ನಾಲ್ಕು ಇವೆ:


ಮೋಸದ ತಕ್ಕಡಿಗಳೂ ಮೋಸದ ಅಳತೆಮಾಪಕಗಳೂ ಯೆಹೋವನಿಗೆ ಅಸಹ್ಯ.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಈ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ.


ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ:


ಆದರೆ ಅವನಿಗೆ ಆಪತ್ತು ಇದ್ದಕ್ಕಿದ್ದಂತೆ ಬರುವುದು. ಅವನು ನಾಶವಾಗುವನು! ಅವನಿಗೆ ಸಹಾಯಮಾಡಲು ಯಾರೂ ಇರುವುದಿಲ್ಲ!


ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.


ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”


ನಿಮ್ಮ ನೆರೆಯವನಿಗೆ ಹಾನಿಮಾಡುವುದನ್ನು ಗುಟ್ಟಾಗಿ ಆಲೋಚಿಸಬೇಡಿರಿ. ಸುಳ್ಳು ವಾಗ್ದಾನ ಮಾಡಬೇಡಿರಿ. ಅವುಗಳನ್ನೆಲ್ಲಾ ಮಾಡುವದರಲ್ಲಿ ಆನಂದಿಸಬೇಡಿರಿ. ಯಾಕೆಂದರೆ ಅವುಗಳನ್ನು ನಾನು ದ್ವೇಷಿಸುತ್ತೇನೆ.” ಇದು ಯೆಹೋವನ ನುಡಿ.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ಆತನು ನಿನ್ನನ್ನು ಆರು ಆಪತ್ತುಗಳಿಂದ ರಕ್ಷಿಸುವನು; ಹೌದು, ಏಳನೆಯ ಆಪತ್ತಿನಿಂದಲೂ ನಿನಗೆ ಕೇಡಾಗದು.


ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.


ಸುಳ್ಳುಗಾರರು ಯೆಹೋವನಿಗೆ ಅಸಹ್ಯ. ಆದರೆ ಸತ್ಯವಂತರು ಆತನಿಗೆ ಇಷ್ಟಕರ.


ಗರ್ವದ ಕಣ್ಣುಗಳು ಮತ್ತು ದುರಾಭಿಮಾನದ ಹೃದಯ ಪಾಪಮಯವಾಗಿದ್ದು ದುಷ್ಟನಿಗೆ ಮಾರ್ಗದರ್ಶನ ನೀಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು