Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:17 - ಪರಿಶುದ್ದ ಬೈಬಲ್‌

17 ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾವವಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷರಕ್ತವನ್ನು ಸುರಿಸುವ ಕೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:17
34 ತಿಳಿವುಗಳ ಹೋಲಿಕೆ  

ಸುಳ್ಳುಗಾರರು ಯೆಹೋವನಿಗೆ ಅಸಹ್ಯ. ಆದರೆ ಸತ್ಯವಂತರು ಆತನಿಗೆ ಇಷ್ಟಕರ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.


ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.


ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.


ಗರ್ವದ ಕಣ್ಣುಗಳು ಮತ್ತು ದುರಾಭಿಮಾನದ ಹೃದಯ ಪಾಪಮಯವಾಗಿದ್ದು ದುಷ್ಟನಿಗೆ ಮಾರ್ಗದರ್ಶನ ನೀಡುತ್ತವೆ.


“ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣ ತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಯೆಹೋವನು ಹೇಳುವುದೇನೆಂದರೆ: “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”


ಸುಳ್ಳುಗಾರನು ತಾನು ಕೇಡುಮಾಡಲಿರುವ ಜನರನ್ನು ದ್ವೇಷಿಸುವನು. ಕಪಟದ ಸಂಗತಿಗಳನ್ನು ಹೇಳುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ಯೆಹೋವನೇ, ನೀನು ದೀನರಿಗೆ ಸಹಾಯಮಾಡುವೆ. ಗರ್ವಿಷ್ಠರಿಗಾದರೋ ಅವಮಾನ ಮಾಡುವೆ.


ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.


ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ.


ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ.


ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು.


ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ವಾಕ್ಚಾತುರ್ಯವು ಮೂಢನಿಗೆ ವಿರುದ್ಧ; ಸುಳ್ಳು ಮಾತು ಗಣ್ಯನಿಗೆ ಇನ್ನೂ ವಿರುದ್ಧ.


ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ.


ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.


ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.


ಯೆಹೋವನು ಈ ಆರು ವಸ್ತುಗಳನ್ನು ದ್ವೇಷಿಸುತ್ತಾನೆ, ಇಲ್ಲ, ಏಳು ವಸ್ತುಗಳನ್ನು ದ್ವೇಷಿಸುತ್ತಾನೆ:


ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.


ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು