Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:1 - ಪರಿಶುದ್ದ ಬೈಬಲ್‌

1 ನನ್ನ ಮಗನೇ, ನನ್ನ ಮಾತುಗಳನ್ನು ಜ್ಞಾಪಕಮಾಡಿಕೋ, ನನ್ನ ಆಜ್ಞೆಗಳನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಗನೇ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿ ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಂದಾ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಗನೇ, ನನ್ನ ಮಾತುಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:1
16 ತಿಳಿವುಗಳ ಹೋಲಿಕೆ  

ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ.


ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.


ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.


ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.


ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.


“ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


ಆತನ ಉಪದೇಶವನ್ನು ಸ್ವೀಕರಿಸಿಕೊ. ಆತನ ವಾಕ್ಯಗಳನ್ನು ನಿನ್ನ ಹೃದಯದಲ್ಲಿಟ್ಟುಕೊ.


ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ.


ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೋ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ.


ನಿನ್ನ ದೃಷ್ಟಿಯು ಅವುಗಳ ಮೇಲಿರಲಿ, ಅವುಗಳನ್ನು ನಿನ್ನ ನೆನಪಿನಲ್ಲಿಟ್ಟುಕೋ.


ನನ್ನ ಮಗನೇ, ನಿನ್ನ ತಂದೆಯ ಆಜ್ಞೆಗಳನ್ನು ಜ್ಞಾಪಕಮಾಡಿಕೋ. ನಿನ್ನ ತಾಯಿಯ ಉಪದೇಶಗಳನ್ನು ಮರೆಯಬೇಡ.


ಏನೇ ಕೊಟ್ಟರೂ, ಎಷ್ಟೇ ಹಣ ಕೊಟ್ಟರೂ ಅವನ ಕೋಪವನ್ನು ತಡೆಯಲಾಗುವುದಿಲ್ಲ.


ಆಕೆಯ ಹೆಜ್ಜೆಗಳು ಮರಣದ ಕಡೆಗೆ ಹೋಗುತ್ತವೆ. ಆಕೆ ನಿನ್ನನ್ನು ನೇರವಾಗಿ ಪಾತಾಳಕ್ಕೆ ನಡೆಸುತ್ತಾಳೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು