Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:28 - ಪರಿಶುದ್ದ ಬೈಬಲ್‌

28 ಆತನು ಆಕಾಶದಲ್ಲಿ ಮೋಡಗಳನ್ನೂ ಸಾಗರಗಳಲ್ಲಿ ನೀರನ್ನೂ ನೆಲೆಗೊಳಿಸಿದಾಗ ನಾನು ಅಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನು ಗಗನವನ್ನು ಮೇಲೆ ಸ್ಥಿರಪಡಿಸಿ ಸಾಗರದ ಸೆಲೆಗಳನ್ನು ನೆಲೆಗೊಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:28
12 ತಿಳಿವುಗಳ ಹೋಲಿಕೆ  

“ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ?


ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸೃಷ್ಟಿಸಿದನು. ಆತನು ವಿವೇಕದ ಮೂಲಕ ಆಕಾಶವನ್ನು ಸೃಷ್ಟಿಸಿದನು.


ಯೆಹೋವನು ಆಕಾಶವನ್ನು ಸೃಷ್ಟಿಸಿದ ಸಮಯದಲ್ಲಿ ಜ್ಞಾನವೆಂಬ ನಾನು ಅಲ್ಲಿದ್ದೆನು. ಆತನು ಸಾಗರದ ಎಲ್ಲೆಗಳನ್ನು ಗೊತ್ತುಪಡಿಸಿದಾಗ ಜ್ಞಾನವೆಂಬ ನಾನು ಅಲ್ಲಿದ್ದೆನು.


ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.


ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು.


ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.


ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.


ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಕಾಶದ ತೂಬುಗಳು ಮುಚ್ಚಿಹೋದವು. ಭೂಸೆಲೆಗಳಿಂದ ಉಕ್ಕುತ್ತಿದ್ದ ನೀರು ಸಹ ನಿಂತುಹೋಯಿತು.


ದೇವರು ಮೋಡಗಳನ್ನು ನೀರಿನಿಂದ ತುಂಬಿಸುವನು. ಆದರೆ ಮೋಡಗಳು ನೀರಿನ ಭಾರದಿಂದ ಒಡೆದುಹೋಗದಂತೆ ನೋಡಿಕೊಳ್ಳುವನು.


ನೀನು ಆಜ್ಞಾಪಿಸಲು ನೀರು ಹಿಂತಿರುಗಿತು. ನೀನು ಬರ್ಜಿಸಲು ನೀರು ಓಡಿಹೋಯಿತು.


ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು