Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:7 - ಪರಿಶುದ್ದ ಬೈಬಲ್‌

7 ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕುಚೋದ್ಯಗಾರರನ್ನು ಶಿಕ್ಷಿಸುವವನು ತನ್ನನ್ನೆ ಅಪಮಾನಕ್ಕೆ ಗುರಿಮಾಡಿಕೊಳ್ಳುತ್ತಾನೆ. ದುಷ್ಟನನ್ನು ಗದರಿಸುವವನು ತನಗೇ ಕಳಂಕ ತಂದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೆ ಕಳಂಕವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:7
13 ತಿಳಿವುಗಳ ಹೋಲಿಕೆ  

ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ.


ಮೂಢನಿಗೆ ಉಪದೇಶಿಸಲು ಪ್ರಯತ್ನಿಸಬೇಡ. ಅವನು ನಿನ್ನ ಜ್ಞಾನದ ಮಾತುಗಳನ್ನು ಗೇಲಿಮಾಡುವನು.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.


ಆಗ ಪ್ರವಾದಿಯಾದ ಚಿದ್ಕೀಯನು ಮೀಕಾಯೆಹುವಿನ ಹತ್ತಿರಕ್ಕೆ ಹೋಗಿ ಅವನ ಮುಖದ ಮೇಲೆ ಹೊಡೆದು, “ಯೆಹೋವನ ಆತ್ಮವು ನನ್ನನ್ನು ಬಿಟ್ಟುಹೋಗಿದೆ ಎಂಬುದನ್ನೂ ಈಗ ನಿನ್ನ ಮೂಲಕ ಮಾತನಾಡುತ್ತಿದ್ದಾನೆ ಎಂಬುದನ್ನೂ ನೀನು ನಿಜವಾಗಿಯೂ ನಂಬುವೆಯಾ?” ಎಂದು ಕೇಳಿದನು.


ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು.


“ಇಗೋ ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.”


ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ.


ಇದನ್ನು ಕೇಳಿ ಜೆರುಸಲೇಮಿನ ಜನರು ಮೌನವಾದರು. ಅವರು ಸೇನಾದಂಡನಾಯಕನಿಗೆ ಯಾವ ಉತ್ತರವನ್ನೂ ಕೊಡಲಿಲ್ಲ. ಯಾಕೆಂದರೆ ಹಿಜ್ಕೀಯನು ಅವರ ಸಂಗಡ ಮಾತಾಡಬಾರದೆಂದು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು