Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:10 - ಪರಿಶುದ್ದ ಬೈಬಲ್‌

10 ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅನೇಕರು ಬರೀ ಮಾತಿನವರಾಗಿಯೂ ಮೋಸಗಾರರಾಗಿಯೂ ಇದ್ದು ಅಧಿಕಾರಕ್ಕೆ ಒಳಗಾಗದವರಾಗಿದ್ದಾರೆ; ಅವರೊಳಗೆ ಹೆಚ್ಚು ಜನರು ಸುನ್ನತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ, ಅನೇಕ ದಂಗೆಕೋರ ಜನರೂ ಬರೀ ಮಾತನಾಡುವವರೂ ಮೋಸಗೊಳಿಸುವವರೂ ಮುಖ್ಯವಾಗಿ ಸುನ್ನತಿಯಾಗಬೇಕೆಂದು ಹೇಳುವ ಗುಂಪಿನವರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಪ್ನಾಚಿ ಜವಾಬ್ದಾರಿ ಸಂಬಾಳಿನಸ್ತಾನಾ ರ್‍ಹಾತಲಿ ಲೈ ಲೊಕಾ ಅಮ್ಚ್ಯಾ ಮದ್ದಿ ಹಾತ್, ಲೈ ಕರುನ್ ಜುದೆವಾಂಚ್ಯಾ ಘರಾನ್ಯಾತ್ನಾ ಪರಿರ್ವತನ್ ಹೊವ್ನ್ ಕ್ರಿಸ್ತಾಚ್ಯಾ ಫಾಟ್ನಾ ಯೆಲ್ಲೆ, ಎಕ್ಲ್ಯಾಕ್ನಿ ವಿರೊದ್ ಹೊವ್ಕ್ ಉಮ್ಮೆದ್ ಭರ್‍ತಲೆ, ಹೆನಿ ಸಗ್ಳೆ ಜಾನಾ ಪೊಕಳ್ ಗೊಸ್ಟಿಯಾನಿ ಲೊಕಾಕ್ನಿ ಮಳ್ಳ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:10
29 ತಿಳಿವುಗಳ ಹೋಲಿಕೆ  

ಕೆಲವರು ಈ ಗುರಿತಪ್ಪಿ ನಿರರ್ಥಕವಾದ ವಿಷಯಗಳನ್ನು ಕುರಿತು ಮಾತಾಡುತ್ತಿದ್ದಾರೆ.


ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ಆದರೆ ಪೇತ್ರನು ಜೆರುಸಲೇಮಿಗೆ ಬಂದಾಗ ಕೆಲವು ಯೆಹೂದ್ಯ ವಿಶ್ವಾಸಿಗಳು ಅವನೊಂದಿಗೆ ವಾದ ಮಾಡಿದರು.


“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.


ಆದರೆ ನೀನು ಯೋಗ್ಯವಾದ ಒಂದನ್ನು ಮಾಡುತ್ತಿರುವೆ. ಅದೇನೆಂದರೆ, ನಿಕೊಲಾಯಿತರು ಮಾಡುವ ಕಾರ್ಯಗಳನ್ನು ನೀನು ದ್ವೇಷಿಸುತ್ತಿ. ನಾನು ಸಹ ಅವರ ಕಾರ್ಯಗಳನ್ನು ದ್ವೇಷಿಸುತ್ತೇನೆ.


ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.


ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.


ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು.


ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.


ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.


ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.


ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!


ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ,


ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.


“ದೇವರನ್ನು ನಾನು ಬಲ್ಲೆನು” ಎಂದು ಹೇಳುವವನು ದೇವರ ಆಜ್ಞೆಗಳಿಗೆ ವಿಧೇಯನಾಗಿರದಿದ್ದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನಲ್ಲಿ ಸತ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು