Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:11 - ಪರಿಶುದ್ದ ಬೈಬಲ್‌

11 ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸ್ಲ್ಯಾಂಚಿ ತೊಂಡಾ ಧಾಪುಚೆ ನಕ್ಕೊ ಹೊಲ್ಲೆಚ್ ಶಿಕ್ವುನ್ ಸಗ್ಳಿ ಕುಟ್ಮಾ ಚಾವ್ತಳಿ ಸರ್ಕೆ ತೆನಿ ಕರ್‍ತಾತ್ , ಹೆ ಸಗ್ಳೆ ತೆನಿ ಹೆ ಬುರ್ಶೆ ಕಾಮ್ ತೆನಿ ಪೈಸ್ಯಾಚ್ಯಾ ಆಸೆನ್ ಕರ್‍ತಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:11
22 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಮನೆಗಳಿಗೆ ನುಸುಳಿಕೊಂಡು ಹೋಗಿ, ಪಾಪಿಷ್ಠರಾದ ಸ್ತ್ರೀಯರನ್ನು ವಶಪಡಿಸಿಕೊಳ್ಳುತ್ತಾರೆ. ಆ ಸ್ತ್ರೀಯರು ಅನೇಕ ಪಾಪದೋಷಗಳಿಂದ ತುಂಬಿದವರಾಗಿದ್ದಾರೆ.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ಯಾವನಾದರೂ ಭೇದ ಹುಟ್ಟಿಸುತ್ತಿದ್ದರೆ, ಅವನಿಗೆ ಎಚ್ಚರಿಕೆ ನೀಡು. ಅವನಿನ್ನೂ ಮುಂದುವರಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡು. ಆದರೂ ಅವನು ಕೇಳದೆಹೋದರೆ ಅವನ ಸಹವಾಸವನ್ನು ತೊರೆದುಬಿಡು.


ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗಾರರನ್ನೆಲ್ಲಾ ಆತನು ಸೋಲಿಸಿದ್ದಾನೆ.


ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.


ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.


ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.


ಈ ವಿಷಯದಲ್ಲಿ ನಾನು ಹೆಮ್ಮೆಪಡುವುದನ್ನು ಅಖಾಯದಲ್ಲಿರುವ ಯಾರೂ ನಿಲ್ಲಿಸಲಾರರು. ಕ್ರಿಸ್ತನ ಸತ್ಯವು ನನ್ನೊಳಗಿರುವುದರಿಂದ ಇದನ್ನು ಹೇಳುತ್ತಿದ್ದೇನೆ.


ಇನ್ನೊಂದು ಪ್ರಶ್ನೆಯನ್ನು ಆತನಿಗೆ ಕೇಳುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.


ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.


ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ, ಅವರು ತಂದೆತಾಯಿಗಳಿಗೆ ಸಹಾಯ ಮಾಡುವುದರ ಮೂಲಕ ಸ್ವಂತ ಕುಟುಂಬಕ್ಕೆ ಗೌರವವನ್ನು ತೋರಬೇಕು. ಅವರು ಹೀಗೆ ಮಾಡಿದರೆ, ತಂದೆತಾಯಿಗಳಿಗೆ ಮತ್ತು ಅಜ್ಜಅಜ್ಜಿಯರಿಗೆ ಪ್ರತ್ಯುಪಕಾರ ಮಾಡಿದಂತಾಗುವುದು. ಅದು ದೇವರಿಗೆ ಮೆಚ್ಚಿಕೆಯಾದದ್ದು.


ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.


ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು