Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:9 - ಪರಿಶುದ್ದ ಬೈಬಲ್‌

9 ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತತತ್ವಗಳಿಗೆ ಅನುಗುಣವಾದ ಸಿದ್ಧಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕೂ ಅದಕ್ಕೆ ವ್ಯತಿರಿಕ್ತವಾಗಿ ನಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕೂ ಆತನು ಸಮರ್ಥನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ತೊ ತ್ಯಾ ಬರೊಸ್ಯಾಕ್ ಯೊಗ್ಯ್ ಅಸಲ್ಲ್ಯಾ ಬರ್‍ಯಾ ಖಬ್ರೆಕ್ ಘಟ್ಟ್ ಧರುನ್ ಘೆವ್ನ್ ರ್‍ಹಾವ್ಚೆ ಮನ್ತಲ್ಯಾ ವಿಶಯಾತ್‍ ಶಿಕ್ವುನ್ ಹೊಲಾ. ಹೆಜ್ಯಾಸಾಟಿ ತೊ ಲೊಕಾಕ್ನಿ ಖರೆಪಾನ್ ಸಿಕ್ವುನ್ಗೆತ್ ತೆಂಕಾ ಉಮ್ಮೆದ್ ಭರಿ ಸಾರ್ಕೆ ಕರುಚೆ, ಕೊನ್ ವಿರೊದ್ ಹೊವ್ನ್ ರ್‍ಹಾತಾ ನ್ಹಯ್, ತೆಂಕಾ ಜೊರ್ ಕರ್‍ತಲೊ ಹೊವ್ನ್ ರ್‍ಹಾವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:9
24 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ.


ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ.


ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಆ ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ.


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಸತ್ಯಬೋಧನೆಯನ್ನು ಅನುಸರಿಸಲು ಜನರು ಮಾಡಬೇಕಾದ ಕಾರ್ಯಗಳನ್ನು ಅವರಿಗೆ ನೀನು ತಿಳಿಸು.


ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.


ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.


ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.


ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.


ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.


“ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.


ನಾನು ಬರುವ ತನಕ ಈಗ ನೀವಿರುವಂತೆಯೇ ಇರಿ.


ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.


ಈ ಸಂಗತಿಯು ನಂಬತಕ್ಕದ್ದೂ ಸರ್ವಾಂಗಿಕಾರಕ್ಕೆ ಯೋಗ್ಯವಾದದ್ದೂ ಆಗಿದೆ.


ನಂಬಿಕೆಯು ನಿನ್ನಲ್ಲಿ ಅಚಲವಾಗಿರಲಿ, ನಿನಗೆ ಯೋಗ್ಯವೆನಿಸಿದ್ದನ್ನೇ ಮಾಡು. ಕೆಲವು ಜನರು ಹೀಗೆ ಮಾಡಲಿಲ್ಲ. ಅವರ ನಂಬಿಕೆಯೆಲ್ಲವೂ ನಾಶವಾಯಿತು.


ಅವನು ಜನರೆಲ್ಲರ ಮುಂದೆ ಯೆಹೂದ್ಯರ ವಿರುದ್ಧ ಬಹು ಬಲವಾಗಿ ವಾದಿಸಿ, ಪವಿತ್ರ ಗ್ರಂಥವನ್ನು ಆಧಾರವಾಗಿ ತೆಗೆದುಕೊಂಡು ಯೇಸುವೇ ಕ್ರಿಸ್ತನೆಂಬುದನ್ನು ಸ್ಪಷ್ಟವಾಗಿ ನಿರೂಪಿಸಿದನು.


ನನ್ನ ನೀತಿಯನ್ನು ಬಲವಾಗಿ ಹಿಡಿದುಕೊಳ್ಳುವೆನು; ಅದನ್ನೆಂದಿಗೂ ಬಿಟ್ಟುಕೊಡೆನು. ನಾನು ಜೀವದಿಂದಿರುವತನಕ ನನ್ನ ಮನಸ್ಸಾಕ್ಷಿಯು ನನ್ನನ್ನು ಕಾಡಿಸುವುದೇ ಇಲ್ಲ.


ಒಂದುವೇಳೆ ನೀವೆಲ್ಲರೂ ಪ್ರವಾದನೆ ಮಾಡುತ್ತಿರುವಾಗ, ತಿಳುವಳಿಕೆಯಿಲ್ಲದ ಅಥವಾ ನಂಬಿಕೆಯಿಲ್ಲದ ವ್ಯಕ್ತಿಯು ಒಳಗೆ ಬಂದರೆ, ನಿಮ್ಮ ಪ್ರವಾದನೆಗಳು ಆ ವ್ಯಕ್ತಿಗೆ ಅವನ ಪಾಪವನ್ನು ತೋರಿಸಿಕೊಡುತ್ತವೆ ಮತ್ತು ನೀವು ಹೇಳುವ ವಿಷಯಗಳ ಆಧಾರದ ಮೇಲೆ ಅವನಿಗೆ ತೀರ್ಪಾಗುವುದು.


ಆದರೆ ನೀನು ಕಲಿತಿರುವ ಉಪದೇಶಗಳನ್ನು ಅನುಸರಿಸು. ಅವು ಸತ್ಯವೆಂಬುದು ನಿನಗೆ ತಿಳಿದಿದೆ. ಅವುಗಳನ್ನು ನಿನಗೆ ಕಲಿಸಿದ ಜನರು ನಂಬಿಕೆಗೆ ಯೋಗ್ಯರೆಂಬುದು ನಿನಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು