Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:14 - ಪರಿಶುದ್ದ ಬೈಬಲ್‌

14 ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಕಾ ಸಗ್ಳ್ಯಾ ರಿತಿಚ್ಯಾ ಬುರ್ಶ್ಯಾ ಪಾನಾತ್ನಾ ಸುಟ್ಕಾ ಕರುಕ್ ಅನಿ ಅಮ್ಕಾ ಪವಿತ್ರ್ ಲೊಕಾ ಕರುಕ್ ಅನಿ ತೆಕಾ ಎಕ್ಲ್ಯಾಕುಚ್ ಸಮಂದ್ ಪಡಲ್ಲೆ ಅನಿ ಬರೆ ಕಾಮ್ ಕರುಕ್ ಉಮ್ಮೆದಿನ್ ಭರಲ್ಲಿ ಲೊಕಾ ಕರುಕ್, ತೆನಿ ಅಮ್ಚ್ಯಾಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:14
54 ತಿಳಿವುಗಳ ಹೋಲಿಕೆ  

ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.


ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


ಒಬ್ಬರಿಗೊಬ್ಬರು ಹಿತಚಿಂತಕರಾಗಿರೋಣ. ಆಗ ಒಬ್ಬರಿಗೊಬ್ಬರು ಪ್ರೀತಿಯನ್ನು ತೋರ್ಪಡಿಸುವುದಕ್ಕೂ ಒಳ್ಳೆಯಕಾರ್ಯಗಳನ್ನು ಮಾಡುವುದಕ್ಕೂ ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ.


ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.


ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಅವರು ಇನ್ನು ಮೇಲೆ ವಿಗ್ರಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸುವೆನು. ನಾನು ಅವರನ್ನು ತೊಳೆದು ಶುದ್ಧಮಾಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.


ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ಆದರೆ ಅವರು ಯೋಗ್ಯಕಾರ್ಯಗಳನ್ನು ಮಾಡುವುದರ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು. ದೇವರನ್ನು ಆರಾಧಿಸುತ್ತೇವೆ ಎಂದು ಹೇಳುವ ಸ್ತ್ರೀಯರು ತಮ್ಮನ್ನು ಈ ರೀತಿಯಲ್ಲಿಯೇ ಅಲಂಕರಿಸಿಕೊಳ್ಳಬೇಕು.


ಯೇಸುವು ಜನರೆಲ್ಲರ ಪಾಪಗಳಿಗೆ ತನ್ನನ್ನೇ ಉಚಿತವಾಗಿ ಒಪ್ಪಿಸಿಕೊಟ್ಟನು. ಜನರೆಲ್ಲರೂ ರಕ್ಷಣೆ ಹೊಂದಬೇಕೆಂಬ ದೇವರ ಅಪೇಕ್ಷೆಗೆ ಯೇಸುವು ತಕ್ಕಕಾಲದಲ್ಲಿ ಸಾಕ್ಷಿನೀಡಿದನು.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.


ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.


ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು.


ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು