Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:15 - ಪರಿಶುದ್ದ ಬೈಬಲ್‌

15 ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ತಿಯಾ ಹಿ ಸಗ್ಳಿ ಗೊಸ್ಟಿಯಾ ಸಿಕ್ವು, ಉಮ್ಮೆದ್ ಅನಿ ಬೆಸಡ್ಕಿ ಸಗ್ಳ್ಯಾ ಅದಿಕಾರಾನ್ ಕರ್, ಕಶ್ಯಾಕ್ ಮಟ್ಲ್ಯಾರ್ ತುಕಾ ಕೊನ್ಬಿ ಕಿಳ್ ಕರುನ್ ಬಗುಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:15
10 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ಪ್ರವಾದಿಯು ಹೇಳಿದ ಮಾತುಗಳು ಸತ್ಯವಾಗಿವೆ. ಆದ್ದರಿಂದ ಅವರು ಮಾಡುತ್ತಿರುವ ತಪ್ಪುಗಳನ್ನು ಅವರಿಗೆ ತಿಳಿಸು. ನೀನು ಅವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು. ಆಗ ಅವರು ತಮ್ಮ ನಂಬಿಕೆಯಲ್ಲಿ ದೃಢವಾಗಿದ್ದು,


ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು.


ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು.


ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.


ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.


ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ.


ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು