Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:2 - ಪರಿಶುದ್ದ ಬೈಬಲ್‌

2 ವೃದ್ಧರಾದವರು, ಜಿತೇಂದ್ರಿಯರೂ ಗಂಭೀರ ಸ್ವಭಾವದವರೂ ವಿವೇಕವುಳ್ಳವರೂ ಆಗಿರಬೇಕೆಂದು ತಿಳಿಸು. ಅವರು ತಮ್ಮ ನಂಬಿಕೆಯಲ್ಲಿ, ಪ್ರೀತಿಯಲ್ಲಿ ಮತ್ತು ತಾಳ್ಮೆಯಲ್ಲಿ ಬಲವಾಗಿರಬೇಕೆಂದು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮ್ಹಾತಾರ್‍ಯಾ ಘೊಮನ್ಸಾನಿ, ಸಂಬಾಳ್ನಾರೆ, ಗಂಬಿರ್, ಅನಿ ಶಾನೆ ಹೊವ್ನ್ ರ್‍ಹಾವ್ಚೆ ಅನಿ ವಿಶ್ವಾಸಾತ್ ಪ್ರೆಮಾತ್ ಅನಿ ಸಗ್ಳೆ ಸಂಬಾಳುನ್ ಘೆವ್ನ್ ಜಾತಲ್ಯಾತ್ ಅನಿ ವಿಶ್ವಾಸಾತ್ ಘಟ್ ಹೊವ್ನ್ ರ್‍ಹಾವ್ಚೆ ಮನುನ್ ಬುದ್ದ್ ಸಾಂಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:2
33 ತಿಳಿವುಗಳ ಹೋಲಿಕೆ  

ಸಾಧುತ್ವ, ಇಂದ್ರಿಯ ನಿಗ್ರಹ ಇಂಥವುಗಳೇ. ಇವುಗಳನ್ನು ತಪ್ಪೆಂದು ಯಾವ ಧರ್ಮಶಾಸ್ತ್ರವೂ ಹೇಳುವುದಿಲ್ಲ.


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಪ್ರವಾದಿಯು ಹೇಳಿದ ಮಾತುಗಳು ಸತ್ಯವಾಗಿವೆ. ಆದ್ದರಿಂದ ಅವರು ಮಾಡುತ್ತಿರುವ ತಪ್ಪುಗಳನ್ನು ಅವರಿಗೆ ತಿಳಿಸು. ನೀನು ಅವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು. ಆಗ ಅವರು ತಮ್ಮ ನಂಬಿಕೆಯಲ್ಲಿ ದೃಢವಾಗಿದ್ದು,


ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;


ಒಳ್ಳೆಯವರಿಗೆ ಅವರ ನರೆಕೂದಲೇ ವೈಭವದ ಕಿರೀಟ.


ಆದರೆ ನಾವು ಹಗಲಿಗೆ ಸೇರಿದವರಾದ್ದರಿಂದ ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಪ್ರೀತಿಯನ್ನೂ ನಂಬಿಕೆಯನ್ನೂ ಧರಿಸಿಕೊಳ್ಳಬೇಕು. ರಕ್ಷಣೆಯ ನಿರೀಕ್ಷೆಯು ನಮಗೆ ಶಿರಸ್ತ್ರಾಣವಾಗಿರಬೇಕು.


ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.


‘ಜ್ಞಾನವು ವೃದ್ಧರಲ್ಲಿಲ್ಲವೇ? ದೀರ್ಘಾಯುಷ್ಯವು ತಿಳಿವಳಿಕೆಯನ್ನು ಉಂಟುಮಾಡುವುದಿಲ್ಲವೇ?’


“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ.


ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಲೆಮರಗಳಂತೆ ಫಲಿಸುವರು.


ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ದೇವರ ಸೇವೆಯನ್ನೂ


ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.


ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.


ಅವನು ತನ್ನ ಸ್ವಂತ ಕುಟುಂಬಕ್ಕೆ ಒಳ್ಳೆಯ ನಾಯಕನಾಗಿರಬೇಕು. ಅವನ ಮಕ್ಕಳು ಅವನಿಗೆ ವಿಧೇಯರಾಗಿದ್ದು ಪೂರ್ಣ ಗೌರವವನ್ನು ನೀಡುವಂತಿರಬೇಕೆಂಬುದು ಇದರ ಅರ್ಥ.


ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.


ಆದುದರಿಂದ ನಾವು ಇತರ ಜನರಂತಿರಬಾರದು. ನಾವು ನಿದ್ರೆ ಮಾಡುವುದೇ ಬೇಡ. ನಾವು ಎಚ್ಚರದಿಂದ ಇದ್ದು, ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.


ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.


ನಾವು ಹುಚ್ಚರಾಗಿದ್ದರೆ ಅದು ದೇವರಿಗೋಸ್ಕರವಾಗಿಯೇ. ನಮಗೆ ಸ್ವಸ್ಥಬುದ್ಧಿಯಿದ್ದರೆ ಅದು ನಿಮಗೋಸ್ಕರವಾಗಿಯೇ.


ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.


ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.


ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.


ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.


ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ, ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.


ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;


ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ.


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು.


ವೃದ್ಧ ಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ


ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು