Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:8 - ಪರಿಶುದ್ದ ಬೈಬಲ್‌

8 ನೀನು ಸತ್ಯವನ್ನೇ ಮಾತನಾಡು. ಆಗ ನಿನ್ನನ್ನು ಟೀಕಿಸಲು ಸಾಧ್ಯವಿಲ್ಲದೆ ನಿನ್ನ ವಿರೋಧಿಗಳು ಅಪಮಾನಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ನಮ್ಮನ್ನು ಎದುರಿಸುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವದಕ್ಕೆ ಅವಕಾಶವಿಲ್ಲದೆ ನಾಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಂದೆಗೆ ಹೊರತಾದ ಸ್ವಸ್ಥ ಮಾತುಗಳನ್ನಾಡುವವನಾಗಿರು. ಇದರಿಂದ ವಿರೋಧಿಸುವವನು ನಿನ್ನ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕಾಗದೆ ನಾಚಿಕೆ ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಶಿಕ್ವುತಾನಾ ಬರ್‍ಯಾ ಗೊಸ್ಟಿಯಾ ವಾಪರ್, ಅಶೆ ತುಜ್ಯಾ ವಿರೊದ್ ಹೊತ್ತ್ಯಾಕ್ನಿ ತುಜ್ಯಾ ವಿರೊದ್ ಬೊಲುಕ್ ಕಾಯ್ಬಿ ರ್‍ಹಾಯ್‍ನಸ್ತಾನಾ ತೆಂಚಿ ತೆಂಕಾಚ್ ಲಜ್ಜಾ ಕರಿ ಸರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:8
15 ತಿಳಿವುಗಳ ಹೋಲಿಕೆ  

ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ನೀವು ಒಳ್ಳೆಯದನ್ನು ಮಾಡುವಾಗ ನಿಮ್ಮನ್ನು ಕುರಿತು ಕೆಟ್ಟಮಾತುಗಳನ್ನು ಆಡಲು ಮೂಢರಿಗೆ ಸಾಧ್ಯವಾಗುವುದಿಲ್ಲ. ದೇವರ ಅಪೇಕ್ಷೆಯೂ ಇದೇ ಆಗಿದೆ.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಆ ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ.


ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು.


ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.


ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು.


ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ.


ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು.


ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.


ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.


ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು