Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:14 - ಪರಿಶುದ್ದ ಬೈಬಲ್‌

14 ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಜನರು ಸತ್ಕ್ರಿಯಾಹೀನರಾಗದಂತೆ ಅವರೂ ಸಹೋದರರಿಗೆ ಬೇಕಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು ಕಲಿತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚಿ ಲೊಕಾ ಅಪ್ಲೊ ಸಗ್ಳೊ ಜಿವನ್ ಬಿ ದುಸ್ರ್ಯಾಂಚ್ಯಾ ಸಾಟ್ನಿ ಕಾಡುನ್ ಥವ್ತಲ್ಯಾತುಚ್ ಕಳ್ದುಕ್ ಶಿಕುಂದಿತ್. ಹೆಚ್ಯಾ ವೈನಾ ಕೊನಾಕ್ ಖರೆಚ್ ಗರಜ್ ಹಾಯ್ ತೆ ಪುರಾ ಹೊಂವ್ದಿತ್. ಅನಿ ತೆನಿ ಅಪ್ಲ್ಯಾ ಫಾಯ್ದ್ಯಾಕ್ ನಸಲ್ಲ್ಯಾಂಚ್ಯಾ ಸರ್ಕೆ ಕರಿಸ್ತಾನಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:14
21 ತಿಳಿವುಗಳ ಹೋಲಿಕೆ  

ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ


ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು.


ಇವೆಲ್ಲವೂ ನಿಮ್ಮಲ್ಲಿದ್ದು ಬೆಳೆಯುತ್ತಿದ್ದರೆ, ನೀವು ಎಂದಿಗೂ ನಿರರ್ಥಕರಾಗದಂತೆ ಇವು ನಿಮಗೆ ಸಹಾಯ ಮಾಡುತ್ತವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಜ್ಞಾನದಲ್ಲಿ ಎಂದಿಗೂ ಅಯೋಗ್ಯರೆನಿಸಿಕೊಳ್ಳದಂತೆ ಇವು ನಿಮಗೆ ಸಹಾಯಮಾಡುತ್ತವೆ.


ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.


ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.


ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಈ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು. ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ನಾನು ಥೆಸಲೋನಿಕದಲ್ಲಿದ್ದಾಗ ನನಗೆ ಅಗತ್ಯವಾದವುಗಳನ್ನು ನೀವು ಹಲವಾರು ಸಲ ಕಳುಹಿಸಿಕೊಟ್ಟಿರಿ.


ನೀನು ಸತ್ಯವನ್ನೇ ಮಾತನಾಡು. ಆಗ ನಿನ್ನನ್ನು ಟೀಕಿಸಲು ಸಾಧ್ಯವಿಲ್ಲದೆ ನಿನ್ನ ವಿರೋಧಿಗಳು ಅಪಮಾನಕ್ಕೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು