Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:2 - ಪರಿಶುದ್ದ ಬೈಬಲ್‌

2 ಯಾರನ್ನೂ ದೂಷಿಸದೆ, ಯಾರೊಂದಿಗೂ ಜಗಳವಾಡದೆ ಮೃದುವಾಗಿ ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾರನ್ನೂ ದೂಷಿಸದೆ ಕುತರ್ಕಮಾಡದೆ ಎಲ್ಲಾ ಮನುಷ್ಯರಿಗೆ ಪೂರ್ಣ ಸಾಧುಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ ಅವರಿಗೆ ಜ್ಞಾಪಕಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕೊನಾಚ್ಯಾ ವಿಶಯಾತ್‍ಬಿ ಬುರ್ಶೆ ಬೊಲುಚೆ ನ್ಹಯ್, ಸಮಾದಾನಾನ್ ಅನಿ ದೊಸ್ತಾಗಿರಿನ್ ರ್‍ಹಾವ್ಚೆ, ಅನಿ ಸಗ್ಳ್ಯಾಂಚ್ಯಾ ವಾಂಗ್ಡಾ ಬರೆ ಕರುನ್ ರ್‍ಹಾವ್ಚೆ ಮನುನ್ ಸಾಂಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:2
35 ತಿಳಿವುಗಳ ಹೋಲಿಕೆ  

ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.


ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ.


ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.


ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ದೇವರೇ, ನೀನು ನನ್ನನ್ನು ಸಂರಕ್ಷಿಸಿ ಜಯಹೊಂದಲು ನನಗೆ ಸಹಾಯಮಾಡಿರುವೆ. ನನ್ನ ಶತ್ರುವನ್ನು ಸೋಲಿಸಲು ನೀನು ನನಗೆ ಸಹಾಯ ಮಾಡಿರುವೆ.


ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.


ನಾವು ಕ್ರಿಸ್ತನ ಅಪೊಸ್ತಲರಾಗಿ ನಿಮ್ಮೊಡಗಿದ್ದಾಗ, ನಿಮ್ಮಿಂದ ದುಡಿಸಿಕೊಳ್ಳಲು ನಮ್ಮ ಅಧಿಕಾರವನ್ನು ಬಳಸಬಹುದಾಗಿತ್ತು. ಆದರೆ ನಿಮ್ಮೊಡನೆ ಬಹಳ ಸಾತ್ವಿಕರಾಗಿದ್ದೆವು. ತಾಯಿಯು ತನ್ನ ಸ್ವಂತ ಚಿಕ್ಕ ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ನಾವು ನಡೆದುಕೊಂಡೆವು.


ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.


ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.


ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು.


ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.


ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದಕ್ಕಿಂತ ಮೇಲ್ಛಾವಣಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಮೇಲು.


ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಬಿತ್ತುವ ವ್ಯಕ್ತಿ.


ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.


ನಿಮ್ಮ ಸಭೆಯಲ್ಲಿ ಪ್ರವೇಶಿಸಿರುವ ಜನರಿಗೂ ಇದೇ ರೀತಿಯಾಗುವುದು. ಅವರ ಕನಸುಗಳೇ ಅವರಿಗೆ ಮಾರ್ಗದರ್ಶಿಯಾಗಿವೆ. ಅವರು ಪಾಪಗಳಿಂದಲೇ ತಮ್ನನ್ನು ಮಲಿನ ಮಾಡಿಕೊಳ್ಳುತ್ತಾರೆ. ಅವರು ಪ್ರಭುವಿನ ಅಧಿಕಾರವನ್ನು ತಿರಸ್ಕರಿಸುತ್ತಾರೆ; ಪ್ರಭಾವದಿಂದ ಕೂಡಿದ ದೇವದೂತರ ವಿರುದ್ಧ ಕೆಟ್ಟದ್ದನ್ನು ಹೇಳುತ್ತಾರೆ.


ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


ಮುಂಗೋಪಿಯು ತನ್ನ ಕೋಪಕ್ಕೆ ದಂಡ ಕೊಡಲೇಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು