Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:7 - ಪರಿಶುದ್ದ ಬೈಬಲ್‌

7 ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಶೆ, ಅಮಿ ತೆಚ್ಯಾ ಕುರ್ಪೆ ವೈನಾ ರಾಕುನ್ ಹೊತ್ತೆ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಲಿ ಮರ್‍ಯಾದ್ ಅಮ್ಕಾ ಗಾವಿ ಸರ್ಕೆ ದೆವಾಚ್ಯಾ ಇದ್ರಾಕ್ ನಿತಿವಂತ್ ಕರುನ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:7
25 ತಿಳಿವುಗಳ ಹೋಲಿಕೆ  

ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.


ಎಲ್ಲರಿಗೂ ರಕ್ಷಣೆಯನ್ನು ಕೊಡುವ ದೇವರ ಕೃಪೆಯು ಪ್ರತ್ಯಕ್ಷವಾಗಿದೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.


ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.


ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.


ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ.


ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.


ಆದ್ದರಿಂದ ಈಗ ನೀನು ಮೊದಲಿನಂತೆ ಗುಲಾಮನಲ್ಲ. ನೀನು ದೇವರ ಮಗನು. ನೀನು ದೇವರ ಮಗನಾಗಿರುವುದರಿಂದ ಆತನು ನಿನ್ನನ್ನು ಬಾಧ್ಯಸ್ತನನ್ನಾಗಿಯೂ ಮಾಡಿದ್ದಾನೆ.


ದುಡಿದವನಿಗೆ ದೊರೆಯುವ ಸಂಬಳ ಉಡುಗೊರೆಯಲ್ಲ, ಅದು ಅವನಿಗೆ ಸಲ್ಲತಕ್ಕದ್ದೇ ಆಗಿದೆ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.


ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು