Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:9 - ಪರಿಶುದ್ದ ಬೈಬಲ್‌

9 ಬುದ್ಧಿಯಿಲ್ಲದೆ ಕುತರ್ಕ ಮಾಡುವ ಜನರಿಂದ, ನಿರರ್ಥಕವಾದ ವಂಶಾವಳಿಗಳ ಚರಿತ್ರೆಯ ಬಗ್ಗೆ ಮಾತನಾಡುವ ಜನರಿಂದ, ಮೋಶೆಯು ಬರೆದಿರುವ ಧರ್ಮಶಾಸ್ತ್ರದಲ್ಲಿರುವ ನಿಯಮಗಳ ಬಗ್ಗೆ ತೊಂದರೆಯನ್ನು ಉಂಟುಮಾಡುವ ಮತ್ತು ವಾಗ್ವಾದ ಮಾಡುವ ಜನರಿಂದ ದೂರವಾಗಿರು. ಅವುಗಳಿಗೆ ಯಾವ ಬೆಲೆಯೂ ಇಲ್ಲ, ಅವುಗಳಿಂದ ಜನರಿಗೆ ಯಾವ ಪ್ರಯೋಜನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಘರಾನಾಂಚ್ಯಾ ಸಾಟ್ನಿ ಹೊತ್ತೊ ವಾದ್ ಮೊಯ್ಜೆಚ್ಯಾ ಕರಾರಾಂಚ್ಯಾ ವಿಶಯಾಚೊ ಝಗ್ಡೊ, ವಾದ್ ವಿವಾದ್ ಅನಿ ಪಿಶಾಪಾನಾಚ್ಯಾ ವಾದಾತ್ನಾ ಧುರ್ ರ್‍ಹಾ, ಕಶ್ಯಾಕ್ ಮಟ್ಲ್ಯಾರ್ ತೆಜಾ ವೈನಾ ಕಾಯ್ಬಿ ಫಾಯ್ದೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:9
10 ತಿಳಿವುಗಳ ಹೋಲಿಕೆ  

ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.


ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ.


ದೇವರ ಸತ್ಯಕ್ಕೆ ಹೊಂದಿಕೆಯಾಗದ ಕ್ಷುಲ್ಲಕ ಕಥೆಗಳನ್ನು ಜನರು ಹೇಳುತ್ತಾರೆ. ಆ ಕಥೆಗಳ ಬೋಧನೆಯನ್ನು ಅನುಸರಿಸಬೇಡ. ದೇವರಿಗೆ ನಿಜವಾದ ಸೇವೆ ಮಾಡಲು ನಿನಗೆ ನೀನೇ ಬೋಧಿಸಿಕೊ.


ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ.


ಯೆಹೂದ್ಯರ ಕಟ್ಟುಕಥೆಗಳನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಸತ್ಯವನ್ನು ಒಪ್ಪಿಕೊಳ್ಳದ ಜನರ ಆಜ್ಞೆಗಳನ್ನು ಅನುಸರಿಸುವುದಿಲ್ಲ.


ಜ್ಞಾನಿಯು ನಿಷ್ಪ್ರಯೋಜಕವಾದ ಮಾತುಗಳಿಂದ ವಾದಿಸುತ್ತಾನೆಂದು ಭಾವಿಸಿಕೊಂಡಿರುವೆಯಾ?


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ.


ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು