Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:12 - ಪರಿಶುದ್ದ ಬೈಬಲ್‌

12 ದಾನಿಯೇಲನು ಕಾವಲುಗಾರನಿಗೆ, “ದಯವಿಟ್ಟು ಹತ್ತು ದಿನಗಳವರೆಗೆ ನಮ್ಮನ್ನು ಪರೀಕ್ಷಿಸಿರಿ. ತಿನ್ನುವದಕ್ಕೆ ಕಾಯಿಪಲ್ಯ, ಕುಡಿಯುವದಕ್ಕೆ ನೀರು, ಇವುಗಳ ಹೊರತು ನಮಗೆ ಇನ್ನೇನೂ ಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಮ್ಮನ್ನು ಪರೀಕ್ಷಿಸಿನೋಡು. ಸೇವಕರಾದ ನಮಗೆ ಭೋಜನಕ್ಕೆ ಬದಲಾಗಿ ಕಾಯಿಪಲ್ಯ, ಪಾನಕ್ಕೆ ಬದಲಾಗಿ ನೀರು ಒದಗಿಸಿದರೆ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ, ಪಾನಕ್ಕೆ ನೀರು ನಮಗೆ ಒದಗಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:12
7 ತಿಳಿವುಗಳ ಹೋಲಿಕೆ  

ಒಬ್ಬನು ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ಭಾವಿಸುತ್ತಾನೆ. ಆದರೆ ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯು ತಾನು ತರಕಾರಿಗಳನ್ನು ಮಾತ್ರ ತಿನ್ನಬಹುದೆಂದು ಭಾವಿಸುತ್ತಾನೆ.


ಆದ್ದರಿಂದ ಕಾವಲುಗಾರನು ಅರಸನ ವಿಶೇಷ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ತೆಗೆದುಕೊಂಡು ಅದಕ್ಕೆ ಬದಲಾಗಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಕಾಯಿಪಲ್ಯಗಳನ್ನು ಕೊಡಲು ಪ್ರಾರಂಭಿಸಿದನು.


ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ಆಗ ದಾನಿಯೇಲನು ತಮ್ಮ ಕಾವಲುಗಾರನೊಂದಿಗೆ ಮಾತನಾಡಿದನು. ಅಶ್ಪೆನಜನು ಕಾವಲುಗಾರನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳ ಮೇಲೆ ದೃಷ್ಟಿಯಿಟ್ಟಿರಬೇಕೆಂದು ಆಜ್ಞಾಪಿಸಿದನು.


ಹತ್ತು ದಿನಗಳಾದ ಮೇಲೆ ನಮ್ಮನ್ನು ಅರಸನ ಆಹಾರ ಪಾನೀಯಗಳನ್ನು ಸ್ವೀಕರಿಸುವ ತರುಣರ ಜೊತೆಗೆ ಹೋಲಿಸಿ ನೋಡಿರಿ. ಯಾರು ಹೆಚ್ಚು ಆರೋಗ್ಯವಂತರಾಗಿ ಕಾಣುತ್ತಾರೆಂಬುದನ್ನು ನೀವೇ ಪರೀಕ್ಷಿಸಿ ನೋಡಿರಿ. ಆಮೇಲೆ ನಮ್ಮ ವಿಷಯದಲ್ಲಿ ನೀವೇ ತೀರ್ಮಾನಿಸಿರಿ. ನಾವು ನಿಮ್ಮ ಸೇವಕರಾಗಿದ್ದೇವೆ” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು