Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:20 - ಪರಿಶುದ್ದ ಬೈಬಲ್‌

20 ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:20
25 ತಿಳಿವುಗಳ ಹೋಲಿಕೆ  

ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ. ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ!


ಅನ್ಯಜನರ ಮಧ್ಯೆ ವಾಸಿಸುವ ಯೆಹೂದ್ಯರು ನಮ್ಮ ಬಳಿಗೆ ಬಂದು ಹತ್ತು ಬಾರಿ ನಮಗೆ ತಿಳಿಸಿದರು. “ವೈರಿಗಳು ನಮ್ಮ ಸುತ್ತಮುತ್ತಲೂ ಇದ್ದಾರೆ. ನಾವು ಎತ್ತ ತಿರುಗಿದರೂ ಅಲ್ಲಿ ಅವರಿದ್ದಾರೆ” ಎಂದರು.


ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.


ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು.


ಆಗ ದಾನಿಯೇಲನು ರಾಜನಿಗೆ, “ರಾಜನಾದ ಬೇಲ್ಶಚ್ಚರನೇ, ನಿನ್ನ ಕಾಣಿಕೆಗಳು ನಿನ್ನಲ್ಲಿಯೇ ಇರಲಿ ಅಥವಾ ಆ ಬಹುಮಾನಗಳನ್ನು ಬೇರೆ ಯಾರಿಗಾದರೂ ಕೊಡು. ಆದರೂ ಗೋಡೆಯ ಮೇಲಿನ ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ವಿವರಿಸುತ್ತೇನೆ” ಎಂದು ಉತ್ತರಿಸಿದನು.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ಅರಸನಾದ ನೆಬೂಕದ್ನೆಚ್ಚರನ ಆಜ್ಞೆಯನ್ನು ಪ್ರಕಟಗೊಳಿಸಲಾಯಿತು. ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕಾಗಿತ್ತು. ದಾನಿಯೇಲ ಮತ್ತು ಅವನ ಸ್ನೇಹಿತರನ್ನು ಹುಡುಕಿ ಅವರ ಕೊಲೆ ಮಾಡುವುದಕ್ಕಾಗಿ ರಾಜಭಟರನ್ನು ಕಳುಹಿಸಲಾಯಿತು.


ನಿನ್ನ ಒಡಂಬಡಿಕೆಯನ್ನು ನಾನು ಧ್ಯಾನಿಸುತ್ತಿರುವುದರಿಂದ ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತಿ. ಎಲ್ಲಾ ರಹಸ್ಯಗಳು ನನಗೆ ಗೊತ್ತು ಎಂದು ನೀನು ನೆನಸುವೆ.


ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು