Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:13 - ಪರಿಶುದ್ದ ಬೈಬಲ್‌

13 ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:13
11 ತಿಳಿವುಗಳ ಹೋಲಿಕೆ  

ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ಹೌದು, ನಾವು ನಿಮ್ಮಲ್ಲಿಗೆ ಬರಬೇಕೆಂದಿದ್ದೆವು. ಪೌಲನಾದ ನಾನು, ನಿಜವಾಗಿಯೂ ಅನೇಕ ಸಲ ಬರಲು ಪ್ರಯತ್ನಿಸಿದೆನು, ಆದರೆ ನಮ್ಮನ್ನು ಸೈತಾನನು ನಿಲ್ಲಿಸಿದನು.


ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ.


ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು