Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:3 - ಪರಿಶುದ್ದ ಬೈಬಲ್‌

3 ಆ ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ, ಮಾಂಸವನ್ನೂ ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ, ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:3
11 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಉಪವಾಸ ಮಾಡುವಾಗ, ಮುಖವನ್ನು ತೊಳೆದುಕೊಳ್ಳಿರಿ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳಿರಿ.


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.


ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.


ನಿನೆವೆಯನ್ನು ನಾಶಮಾಡುವ ಸೈನಿಕರೇ, ಬೆಳ್ಳಿಬಂಗಾರಗಳನ್ನು ತೆಗೆದುಕೊಳ್ಳಿರಿ. ತೆಗೆದುಕೊಳ್ಳಲು ಎಷ್ಟೋ ವಸ್ತುಗಳಿವೆ. ಎಷ್ಟೋ ನಿಕ್ಷೇಪಗಳಿವೆ.


ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ.


ಅವನಿಗೆ ಊಟಮಾಡಲೂ ಸಾಧ್ಯವಿಲ್ಲ. ಅವನು ಅತ್ಯಧಿಕವಾದ ನೋವಿನಿಂದ ಬಳಲುತ್ತಿರುವುದರಿಂದ ಮೃಷ್ಠಾನ್ನಕ್ಕೂ ಅಸಹ್ಯಪಡುವನು.


ಸೌಲನ ಮೊಮ್ಮಗನಾದ ಮೆಫೀಬೋಶೆತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶೆತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗೆದಿರಲಿಲ್ಲ.


ನೀನು ನನ್ನ ತಲೆಗೆ ಎಣ್ಣೆಯನ್ನು ಹಚ್ಚಲಿಲ್ಲ. ಈಕೆಯಾದರೋ ನನ್ನ ಪಾದಗಳಿಗೆ ಪರಿಮಳತೈಲವನ್ನು ಹಚ್ಚಿದಳು.


ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು