Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:17 - ಪರಿಶುದ್ದ ಬೈಬಲ್‌

17 ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಉತ್ತರದ ರಾಜನು ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಶಕ್ತಿಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿಯೆ ಹೆಣ್ಣನ್ನು ಕೊಡುವನು. ಆದರೆ ಈ ಉಪಾಯ ಫಲಿಸದು. ಅದರಿಂದ ತನಗೂ ಅನುಕೂಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದಮಾಡಿಕೊಳ್ಳುವನು; ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣುಮಗಳನ್ನು ಕೊಡುವನು; ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:17
15 ತಿಳಿವುಗಳ ಹೋಲಿಕೆ  

ದೇವರು ಮತ್ತೆ ಹೇಳಿದ್ದೇನೆಂದರೆ: “ಈಗ ನೀನು ನಿನ್ನ ಬಟ್ಟೆಯ ತೋಳನ್ನು ಮೇಲಕ್ಕೆ ಮಡಿಚಿ ನಿನ್ನ ಕೈಯನ್ನು ಇಟ್ಟಿಗೆಯ ಮೇಲೆ ಚಾಚು. ಜೆರುಸಲೇಮ್ ನಗರದ ಮೇಲೆ ಯುದ್ಧ ಮಾಡುವವನಂತೆ ನಟಿಸು. ಪಟ್ಟಣದ ವಿರುದ್ಧವಾಗಿ ಪ್ರವಾದಿಸು.


ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.


ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


“ನನ್ನೊಂದಿಗಿಲ್ಲದವನು ನನಗೆ ವಿರೋಧವಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.


ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.


ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.


“ಅದಾದ ಮೇಲೆ ಉತ್ತರದ ರಾಜನು ತನ್ನ ದೇಶದ ಭದ್ರವಾದ ಕೋಟೆಗಳಿಗೆ ಹಿಂದಿರುಗುವನು. ಆದರೆ ಅವನು ದುರ್ಬಲನಾಗಿ ಬಿದ್ದುಹೋಗುವನು; ಕೊನೆಗೊಳ್ಳುವನು.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


“ನರಪುತ್ರನೇ, ಅಮ್ಮೋನಿನ ಕಡೆಗೆ ಮುಖಮಾಡಿ, ಅವರಿಗೆ ವಿರುದ್ಧವಾಗಿ ಪ್ರವಾದಿಸು.


ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು.


ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.


ಆದ್ದರಿಂದ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುವಾಗ ನನ್ನ ಶತ್ರುಗಳನ್ನು ಸೋಲಿಸು. ನೀನು ಮಾಡಬಲ್ಲೆ ಎಂದು ನನಗೆ ಗೊತ್ತಿದೆ; ನೀನೇ ದೇವರು!


ಯೆಹೋಷಾಫಾಟನು ಭಯಭೀತನಾಗಿ ಯೆಹೋವನನ್ನು ವಿಚಾರಿಸಲು ನಿರ್ಧರಿಸಿದನು. ಯೆಹೂದದ ಎಲ್ಲಾ ಜನರು ಉಪವಾಸ ಮಾಡಬೇಕೆಂದು ಆಜ್ಞೆ ಹೊರಡಿಸಿದನು.


ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು