Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:23 - ಪರಿಶುದ್ದ ಬೈಬಲ್‌

23 ಅನೇಕ ರಾಷ್ಟ್ರಗಳು ಕ್ರೂರಿಯಾದ ಮತ್ತು ವಂಚಕನಾದ ಆ ಅರಸನೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳುವವು. ಆದರೆ ಅವನು ಸುಳ್ಳು ಹೇಳಿ ಅವರನ್ನು ವಂಚಿಸುವನು. ಅವನು ಹೆಚ್ಚಿನ ಅಧಿಕಾರವನ್ನು ಸಂಪಾದಿಸಿದರೂ ಕೆಲವೇ ಜನರು ಅವನಿಗೆ ಬೆಂಬಲ ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸ ಮಾಡುವನು; ಸ್ವಲ್ಪ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸಮಾಡುವನು. ಕೊಂಚ ಜನರ ಸಹಾಯದಿಂದಲೆ ಏಳಿಗೆಯಾಗಿ ಬಲಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ಸಂಗಡ ಒಪ್ಪಂದಮಾಡಿಕೊಂಡವನಿಗೆ ಕೂಡಲೆ ಮೋಸಮಾಡುವನು; ಕೊಂಚ ಜನದ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಸಂಗಡ ಒಪ್ಪಂದ ಮಾಡಿಕೊಂಡ ಮೇಲೆ ಕಪಟವಾಗಿ ನಡೆಯುವನು. ಕೆಲವು ಜನರ ಸಹಾಯದಿಂದ ಅಧಿಕಾರ ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:23
11 ತಿಳಿವುಗಳ ಹೋಲಿಕೆ  

“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.


ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;


ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿಫಲವನ್ನು ಹೊಂದಿಕೊಳ್ಳುವನು.


ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು.


ಯಾಕೋಬನ ಗಂಡುಮಕ್ಕಳು ಶೆಕೆಮನಿಗೂ ಅವನ ತಂದೆಗೂ ಸುಳ್ಳು ಹೇಳಲು ನಿರ್ಧರಿಸಿದರು. ತಮ್ಮ ತಂಗಿಯಾದ ದೀನಳಿಗೆ ಶೆಕೆಮನು ಅಂಥ ಕೆಟ್ಟಕಾರ್ಯವನ್ನು ಮಾಡಿದ್ದರಿಂದ ಅವರು ಇನ್ನೂ ಆವೇಶದಿಂದ ಇದ್ದರು.


ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.


“ಶ್ರೀಮಂತ ದೇಶಗಳು ನೆಮ್ಮದಿಯಿಂದಿರುವಾಗ ಈ ಕ್ರೂರಿಯು ಪೂರ್ವ ಸೂಚನೆಯಿಲ್ಲದೆ ಅವುಗಳ ಮೇಲೆ ದಾಳಿ ಮಾಡುವನು. ಅವನು ಸರಿಯಾದ ಸಮಯಕ್ಕೆ ದಾಳಿಮಾಡುವನು; ಅವನ ಪೂರ್ವಿಕರು ವಿಫಲರಾದ ದೇಶಗಳಲ್ಲಿ ಜಯ ಸಂಪಾದಿಸುವನು. ಅವನು ಸೋಲಿಸಿದ ದೇಶಗಳನ್ನು ಕೊಳ್ಳೆಹೊಡೆದು ದೊರೆತ ಸಂಪತ್ತನ್ನು ತನ್ನ ಅನುಯಾಯಿಗಳಲ್ಲಿ ಹಂಚುವನು. ಅವನು ಭದ್ರವಾದ ನಗರಗಳನ್ನು ಹಿಡಿದುಕೊಳ್ಳಲು ಮತ್ತು ನಾಶಮಾಡಲು ಯೋಜನೆಗಳನ್ನು ಮಾಡುವನು. ಅವನಿಗೆ ಜಯಸಿಕ್ಕಿದರೂ ಅದು ಸ್ವಲ್ಪ ಕಾಲದವರೆಗೆ ಮಾತ್ರ ಇರುತ್ತದೆ.


ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು