Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:24 - ಪರಿಶುದ್ದ ಬೈಬಲ್‌

24 “ಶ್ರೀಮಂತ ದೇಶಗಳು ನೆಮ್ಮದಿಯಿಂದಿರುವಾಗ ಈ ಕ್ರೂರಿಯು ಪೂರ್ವ ಸೂಚನೆಯಿಲ್ಲದೆ ಅವುಗಳ ಮೇಲೆ ದಾಳಿ ಮಾಡುವನು. ಅವನು ಸರಿಯಾದ ಸಮಯಕ್ಕೆ ದಾಳಿಮಾಡುವನು; ಅವನ ಪೂರ್ವಿಕರು ವಿಫಲರಾದ ದೇಶಗಳಲ್ಲಿ ಜಯ ಸಂಪಾದಿಸುವನು. ಅವನು ಸೋಲಿಸಿದ ದೇಶಗಳನ್ನು ಕೊಳ್ಳೆಹೊಡೆದು ದೊರೆತ ಸಂಪತ್ತನ್ನು ತನ್ನ ಅನುಯಾಯಿಗಳಲ್ಲಿ ಹಂಚುವನು. ಅವನು ಭದ್ರವಾದ ನಗರಗಳನ್ನು ಹಿಡಿದುಕೊಳ್ಳಲು ಮತ್ತು ನಾಶಮಾಡಲು ಯೋಜನೆಗಳನ್ನು ಮಾಡುವನು. ಅವನಿಗೆ ಜಯಸಿಕ್ಕಿದರೂ ಅದು ಸ್ವಲ್ಪ ಕಾಲದವರೆಗೆ ಮಾತ್ರ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು; ತಂದೆತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು; ಸೂರೆಸುಲಿಗೆ ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು; ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನಗಳ ಫಲವತ್ತಾದ ಪ್ರದೇಶಗಳಲ್ಲಿ ನುಗ್ಗಿ, ತಂದೆ ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು. ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು, ತನ್ನನ್ನು ಅವರಿಗೆ ಹಂಚುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:24
11 ತಿಳಿವುಗಳ ಹೋಲಿಕೆ  

ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ?


ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ಆ ಸಮಯದಲ್ಲಿ ನಿನ್ನ ಮನಸ್ಸಿಗೆ ಒಂದು ಆಲೋಚನೆಯು ಹೊಳೆಯುವುದು. ನೀನು ಒಂದು ದುಷ್ಟ ಯೋಜನೆಯನ್ನು ಮಾಡುವಿ.


ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ.


ಉದಾರಿಯ ಸ್ನೇಹಿತರಾಗಿರಲು ಅನೇಕರಿಗೆ ಆಸೆ. ದಾನಶೂರನಿಗೆ ಸ್ನೇಹಿತರಾಗಿರಲು ಎಲ್ಲರಿಗೂ ಆಸೆ.


ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.


ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.


ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.


ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)


ಹುಲ್ಲುಗಾವಲಿಗೆ ನಾನು ಅವುಗಳನ್ನು ನಡೆಸುವೆನು. ಇಸ್ರೇಲಿನ ಎತ್ತರವಾದ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೆಯ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು.


ಅನೇಕ ರಾಷ್ಟ್ರಗಳು ಕ್ರೂರಿಯಾದ ಮತ್ತು ವಂಚಕನಾದ ಆ ಅರಸನೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳುವವು. ಆದರೆ ಅವನು ಸುಳ್ಳು ಹೇಳಿ ಅವರನ್ನು ವಂಚಿಸುವನು. ಅವನು ಹೆಚ್ಚಿನ ಅಧಿಕಾರವನ್ನು ಸಂಪಾದಿಸಿದರೂ ಕೆಲವೇ ಜನರು ಅವನಿಗೆ ಬೆಂಬಲ ನೀಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು