Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:25 - ಪರಿಶುದ್ದ ಬೈಬಲ್‌

25 “ಕ್ರೂರನಾದ ಮತ್ತು ವಂಚಕನಾದ ಆ ರಾಜನ ಹತ್ತಿರ ಅತಿ ದೊಡ್ಡ ಸೈನ್ಯವಿರುವದು. ಅವನು ಆ ಸೈನ್ಯದಿಂದ ತನ್ನ ಶಕ್ತಿಯನ್ನು ಪ್ರದರ್ಶಿಸಲು ಧೈರ್ಯ ತಂದುಕೊಂಡು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ದಕ್ಷಿಣದ ರಾಜನು ಅತಿದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯವನ್ನು ಕೂಡಿಸಿಕೊಂಡು ಯುದ್ಧಕ್ಕೆ ಹೋಗುವನು. ಆದರೆ ಅವನ ವೈರಿಗಳು ರಹಸ್ಯವಾಗಿ ಒಂದು ಕುಯುಕ್ತಿಯನ್ನು ಮಾಡುವರು. ದಕ್ಷಿಣದ ರಾಜನು ಸೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಅವನು ಧೈರ್ಯತಂದುಕೊಂಡು, ದೊಡ್ಡ ದಂಡೆತ್ತಿ, ದಕ್ಷಿಣರಾಜನಿಗೆ ವಿರುದ್ಧ ತನ್ನ ರಾಜ್ಯದ ಶಕ್ತಿಯನ್ನೆಲ್ಲ ಕೂಡಿಸುವನು. ದಕ್ಷಿಣರಾಜನಾದರೋ ಅತ್ಯಧಿಕ ಬಲವುಳ್ಳ ಮಹಾಸೈನ್ಯ ಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ಜಯಗಳಿಸನು. ಕುಯುಕ್ತಿಗಳಿಗೆ ಗುರಿಯಾಗಿ ಸೋಲನ್ನು ಅಪ್ಪಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ದೊಡ್ಡ ದಂಡೆತ್ತಿ ದಕ್ಷಿಣರಾಜನಿಗೆ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯತಂದುಕೊಳ್ಳಲು ದಕ್ಷಿಣರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು; ಆದರೆ ನಿಲ್ಲಲಾರನು; ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:25
6 ತಿಳಿವುಗಳ ಹೋಲಿಕೆ  

“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.


ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೋ ಅಭಿವೃದ್ಧಿ ಹೊಂದುವನು.


ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.


“ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನು ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು.


“ದಕ್ಷಿಣ ದಿಕ್ಕಿನ ರಾಜನು ಪ್ರಬಲನಾಗುವನು. ಆದರೆ ಆಗ ಅವನ ಒಬ್ಬ ಸೇನಾಧಿಪತಿಯು ದಕ್ಷಿಣದಿಕ್ಕಿನ ಅರಸನನ್ನು ಸೋಲಿಸುವನು. ಆ ಸೇನಾಧಿಪತಿಯು ಆಳಲು ಪ್ರಾರಂಭಿಸುವನು; ಅವನು ಬಹಳ ಪ್ರಭಾವಶಾಲಿಯಾಗುವನು.


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು