Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:26 - ಪರಿಶುದ್ದ ಬೈಬಲ್‌

26 ದಕ್ಷಿಣದ ರಾಜನ ಒಳ್ಳೆಯ ಸ್ನೇಹಿತರೆಂದು ಭಾವಿಸಲಾದ ಜನರು ಅವನನ್ನು ನಾಶಮಾಡಲು ಪ್ರಯತ್ನ ಮಾಡುವರು. ಅವನ ಸೈನ್ಯಕ್ಕೆ ಸೋಲುಂಟಾಗುವದು. ಅವನ ಅನೇಕ ಸೈನಿಕರು ಯುದ್ಧದಲ್ಲಿ ಮಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನ ಮೃಷ್ಟಾನ್ನ ತಿಂದವರೇ ಅವನಿಗೆ ಎರಡು ಬಗೆಯುವರು. ಅವನ ಸೈನ್ಯವು ಕೊಚ್ಚಿಕೊಂಡುಹೋಗುವುದು. ಬಹುಜನರು ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರರಾಜನ ಸೈನ್ಯವು ತುಂಬಿತುಳುಕುವದು; ಬಹು ಜನರು ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನ ರಾಜ ಭೋಜನದಲ್ಲಿ ಭಾಗವನ್ನು ತಿಂದವರೇ, ಅವನನ್ನು ನಾಶಮಾಡುವರು. ಅವನ ಸೈನ್ಯವು ತುಂಬಿ ತುಳುಕುವುದು ಮತ್ತು ಅನೇಕರು ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:26
11 ತಿಳಿವುಗಳ ಹೋಲಿಕೆ  

“ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನು ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಯೇಸು, “ಈ ಹನ್ನೆರಡು ಜನರಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಅವನು ನನ್ನೊಡನೆ ಒಂದೇ ಬಟ್ಟಲಿನಲ್ಲಿ ತನ್ನ ರೊಟ್ಟಿಯನ್ನು ಅದ್ದುತ್ತಿದ್ದಾನೆ.


ಯೇಸು, “ಬಟ್ಟಲಲ್ಲಿ ನನ್ನ ಸಂಗಡ ತನ್ನ ಕೈಗಳನ್ನು ಅದ್ದುವವನೇ ನನಗೆ ವಿರೋಧವಾಗಿದ್ದಾನೆ.


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.


ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


ಹಜಾಯೇಲನು ಎಲೀಷನ ಬಳಿಯಿಂದ ಹೊರಟು ತನ್ನ ರಾಜನ ಬಳಿಗೆ ಹೋದನು. ಬೆನ್ಹದದನು ಹಜಾಯೇಲನಿಗೆ, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದನು. ಹಜಾಯೇಲನು, “ನಿನ್ನ ಕಾಯಿಲೆಯು ವಾಸಿಯಾಗುತ್ತದೆಯೆಂದು ಎಲೀಷನು ನನಗೆ ಹೇಳಿದನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು