Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:27 - ಪರಿಶುದ್ದ ಬೈಬಲ್‌

27 ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:27
24 ತಿಳಿವುಗಳ ಹೋಲಿಕೆ  

ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.


ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


“ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಅಂತ್ಯಕಾಲದ ಕುರಿತಾದದ್ದು.


ಕೆಟ್ಟ ಆಲೋಚನೆಯನ್ನು ಅಡಗಿಸಿಡುವ ಕನಿಕರದ ಮಾತುಗಳು ಕಡಿಮೆ ಬೆಲೆಯ ಮಡಿಕೆಯ ಮೇಲಿನ ಬೆಳ್ಳಿಯ ಲೇಪನದಂತಿವೆ.


ಕೆಡುಕರು ಯಾವಾಗಲೂ ಕೇಡು ಮಾಡಲಿಚ್ಛಿಸುವರು. ಸಮಾಧಾನವನ್ನು ಅಪೇಕ್ಷಿಸುವವರು ಸಂತೋಷವಾಗಿರುವರು.


ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಅನ್ಯಾಯವನ್ನೇ.


ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.


ಸಹೋದರ ಸಹೋದರಿಯರೇ, ಈಗ ನಾವು ಕಾಲ ಮತ್ತು ದಿನಗಳ ಬಗ್ಗೆ ನಿಮಗೆ ಬರೆಯುವ ಅವಶ್ಯವಿಲ್ಲ.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೇ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.


“ಸರಿಯಾದ ಸಮಯ ನೋಡಿ ಉತ್ತರದ ರಾಜನು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ಆದರೆ ಈ ಸಲ ಅವನು ಹಿಂದಿನಂತೆ ಜಯಶೀಲನಾಗುವದಿಲ್ಲ.


ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.


ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ದ್ರಾಕ್ಷಾಲತೆಯು ಬದುಕಿ ಬೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಬೇರುಗಳನ್ನು ಎಳೆದುಹಾಕಿ, ಅದರ ದ್ರಾಕ್ಷಿಹಣ್ಣುಗಳನ್ನು ಕಿತ್ತುಹಾಕುವುದು. ಆಗ ಚಿಗುರುಗಳು ಬಾಡಿ ಒಣಗಿಹೋಗುವವು. ಆ ಸಸಿಯು ಬಲಹೀನವಾಗುವುದು. ಆಗ ಅದನ್ನು ಬೇರುಸಹಿತ ಕಿತ್ತುಹಾಕಲು ಮಹಾ ಬಲವಾಗಲಿ ಅಥವಾ ದೊಡ್ಡಸೈನ್ಯವಾಗಲಿ ಅಗತ್ಯವಿರುವದಿಲ್ಲ.


ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ಅಬ್ಷಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ನೋನನನ್ನು ಕಳುಹಿಸು” ಎಂದು ಕೇಳಿದನು. ರಾಜನಾದ ದಾವೀದನು ಅಬ್ಷಾಲೋಮನಿಗೆ, “ನಿನ್ನ ಜೊತೆಯಲ್ಲಿ ಅವನೇಕೆ ಬರಬೇಕು?” ಎಂದನು.


“ಉತ್ತರದ ರಾಜನು ಅಪಾರ ಸಂಪತ್ತಿನೊಂದಿಗೆ ಸ್ವದೇಶಕ್ಕೆ ಮರಳುವನು. ಆಗ ಅವನು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿ ಆಚರಿಸುವ ತೀರ್ಮಾನ ಮಾಡುವನು. ಅವನು ಯೋಚಿಸಿದಂತೆ ಮಾಡಿ ತನ್ನ ದೇಶಕ್ಕೆ ಹಿಂತಿರುಗಿ ಹೋಗುವನು.


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು