Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:3 - ಪರಿಶುದ್ದ ಬೈಬಲ್‌

3 ಆಮೇಲೆ ಒಬ್ಬ ಅತಿ ಪರಾಕ್ರಮಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನು ಬರುವನು. ಅವನು ಹೆಚ್ಚಿನ ಸಾಮರ್ಥ್ಯದಿಂದ ಆಳುವನು. ಅವನು ತನ್ನ ಮನಸ್ಸಿಗೆ ಬಂದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:3
10 ತಿಳಿವುಗಳ ಹೋಲಿಕೆ  

“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.


“ಉತ್ತರದ ರಾಜನು ತನ್ನ ಇಷ್ಟಬಂದಂತೆ ಮಾಡುವನು. ಯಾರಿಂದಲೂ ಅವನನ್ನು ತಡೆಯಲು ಸಾಧ್ಯವಾಗುವದಿಲ್ಲ. ಅವನು ಸುಂದರವಾದ ನಾಡಿನ ಮೇಲೆ ಅಧಿಕಾರವನ್ನೂ ನಿಯಂತ್ರಣವನ್ನೂ ಸಂಪಾದಿಸುವನು. ಅದನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿರುವನು.


ಆ ಹೋತವು ಗ್ರೀಕ್ ರಾಜ್ಯ. ಅದರ ಎರಡು ಕಣ್ಣುಗಳ ಮಧ್ಯದ ಕೊಂಬು ಮೊದಲನೆಯ ಅರಸ.


“ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.


ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು