Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:33 - ಪರಿಶುದ್ದ ಬೈಬಲ್‌

33 “ಜ್ಞಾನಿಗಳಾದ ಯೆಹೂದ್ಯರು ಏನು ನಡೆದಿದೆ ಎಂಬುದನ್ನು ತಿಳಿದುಕೊಳ್ಳಲು ಜನರಿಗೆ ಸಹಾಯ ಮಾಡುವರು. ಜ್ಞಾನಿಗಳಾದವರು ಸಹ ಅನೇಕ ಹಿಂಸೆಗಳಿಗೆ ತುತ್ತಾಗುವರು. ಕೆಲವು ಜನ ಜ್ಞಾನಿಗಳು ಕತ್ತಿಯಿಂದ ಕೊಲ್ಲಲ್ಪಡುವರು, ಕೆಲವರನ್ನು ಬೆಂಕಿಯಲ್ಲಿ ಹಾಕಲಾಗುವದು ಅಥವಾ ಬಂಧಿಸಲಾಗುವುದು. ಕೆಲವು ಯೆಹೂದ್ಯರ ಮನೆಯನ್ನು, ಆಸ್ತಿಪಾಸ್ತಿಯನ್ನು ಕಿತ್ತುಕೊಳ್ಳಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಜನರಲ್ಲಿನ ಬುದ್ಧಿವಂತ ನಾಯಕರು ಅನೇಕರಿಗೆ ಬುದ್ಧಿಹೇಳುವರು. ಕೆಲಕಾಲ ಅವರು ಕತ್ತಿ-ಬೆಂಕಿ-ಸೆರೆ-ಸೂರೆಗಳಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:33
29 ತಿಳಿವುಗಳ ಹೋಲಿಕೆ  

ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.


ನನ್ನ ಜೀವಿತವನ್ನು ದೇವರಿಗಾಗಿ ಅರ್ಪಿಸುತ್ತಿದ್ದೇನೆ. ನಾನು ಈ ಲೋಕವನ್ನು ಬಿಟ್ಟುಹೋಗುವ ಕಾಲವು ಸಮೀಪಿಸಿದೆ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ.


ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,


ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು