Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:36 - ಪರಿಶುದ್ದ ಬೈಬಲ್‌

36 “ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:36
47 ತಿಳಿವುಗಳ ಹೋಲಿಕೆ  

ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.


“ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಅಂತ್ಯಕಾಲದ ಕುರಿತಾದದ್ದು.


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


“ಉತ್ತರದ ರಾಜನು ತನ್ನ ಇಷ್ಟಬಂದಂತೆ ಮಾಡುವನು. ಯಾರಿಂದಲೂ ಅವನನ್ನು ತಡೆಯಲು ಸಾಧ್ಯವಾಗುವದಿಲ್ಲ. ಅವನು ಸುಂದರವಾದ ನಾಡಿನ ಮೇಲೆ ಅಧಿಕಾರವನ್ನೂ ನಿಯಂತ್ರಣವನ್ನೂ ಸಂಪಾದಿಸುವನು. ಅದನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿರುವನು.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ನೀನು ಯಾವಾಗಲೂ ನಿನ್ನೊಳಗೆ, “ನಾನು ಉನ್ನತವಾದ ಆಕಾಶಕ್ಕೆ ಹೋಗುವೆನು. ನಾನು ದೇವರ ನಕ್ಷತ್ರಗಳಿಗಿಂತ ಮೇಲೆ ನನ್ನ ಸಿಂಹಾಸನವನ್ನು ಸ್ಥಾಪಿಸುವೆನು. ನಾನು ಜಾಫೋನ್ ಎಂಬ ಪವಿತ್ರ ಪರ್ವತದಲ್ಲಿ ಕುಳಿತುಕೊಳ್ಳುವೆನು. ಆ ಪರ್ವತದಲ್ಲಿ ನಾನು ದೇವರುಗಳನ್ನು ಸಂಧಿಸುವೆನು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಲು ಸಿದ್ಧನಾಗುವ ದಿನಗಳಲ್ಲಿ ದೇವರ ರಹಸ್ಯವಾದ ಯೋಜನೆಯು ನೆರವೇರುವುದು. ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿದ ಸುವಾರ್ತೆಯೇ ಈ ಯೋಜನೆ.”


ಆದರೆ ಸ್ವಲ್ಪ ಸಮಯದ ನಂತರ ನನ್ನ ಸಿಟ್ಟು ತಣ್ಣಗಾಗುವದು. ಅಶ್ಶೂರವು ಸಾಕಷ್ಟು ನಿಮ್ಮನ್ನು ಶಿಕ್ಷಿಸಿದನೆಂದು ನಾನು ತೃಪ್ತಿಗೊಳ್ಳುವೆನು.”


ದೇವಾಧಿದೇವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನ ಪ್ರೀತಿ ಶಾಶ್ವತವಾದದ್ದು.


ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.


ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ಆದರೆ ಆ ಸ್ತ್ರೀಗೆ ಮಹಾಗರುಡನ ಎರಡು ರೆಕ್ಕೆಗಳನ್ನು ಕೊಡಲ್ಪಟ್ಟದ್ದರಿಂದ, ತನಗಾಗಿ ಮರುಳುಗಾಡಿನಲ್ಲಿ ಸಿದ್ಧಪಡಿಸಿದ ಸ್ಥಳಕ್ಕೆ ಹಾರಿ ಹೋಗಲು ಆಕೆಗೆ ಸಾಧ್ಯವಾಯಿತು. ಅಲ್ಲಿ ಅವಳು ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುತ್ತಾ ಸರ್ಪಕ್ಕೆ ಕಾಣದಂತೆ ಮರೆಯಾಗಿರುವಳು.


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ.


“ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪು ಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.


ಆಮೇಲೆ ಒಬ್ಬ ಅತಿ ಪರಾಕ್ರಮಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನು ಬರುವನು. ಅವನು ಹೆಚ್ಚಿನ ಸಾಮರ್ಥ್ಯದಿಂದ ಆಳುವನು. ಅವನು ತನ್ನ ಮನಸ್ಸಿಗೆ ಬಂದಂತೆ ಮಾಡುವನು.


ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು.


“ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.


ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.


ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.


ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.


“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”


ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.


“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.


“ಆ ಉತ್ತರದ ರಾಜನು ಅವನ ಪೂರ್ವಿಕರು ಪೂಜಿಸಿದ ದೇವರುಗಳನ್ನೂ ಸ್ತ್ರೀಯರು ಪೂಜಿಸುವ ವಿಗ್ರಹಗಳನ್ನೂ ಲಕ್ಷಿಸನು. ಅವನು ಯಾವ ದೇವರನ್ನೂ ಲಕ್ಷಿಸನು. ಅದಕ್ಕೆ ಬದಲಾಗಿ ಅವನು ತನ್ನನ್ನು ತಾನು ಹೊಗಳಿಕೊಳ್ಳುವನು; ತನ್ನನ್ನು ಎಲ್ಲ ದೇವರುಗಳಿಗಿಂತಲೂ ಶ್ರೇಷ್ಠನೆಂದು ತೋರಿಸಿಕೊಳ್ಳುವನು.


ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ಸರ್ವಶಕ್ತನೂ ಒಡೆಯನೂ ಆದ ಯೆಹೋವನು ಖಂಡಿತವಾಗಿಯೂ ಈ ದೇಶವನ್ನು ನಾಶಮಾಡುತ್ತಾನೆ.


ನಾನು ಉನ್ನತ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸರಿಸಮಾನನಾಗುತ್ತೇನೆ” ಎಂದುಕೊಳ್ಳುತ್ತಿದ್ದೆ.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಮೋಲೆಕನಿಗೆ ಅಂದವಾಗಿ ತೋರುವಂತೆ ನೀವು ನಿಮಗೆ ಎಣ್ಣೆ, ಸುಗಂಧದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವದು.


“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.


ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು