Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:4 - ಪರಿಶುದ್ದ ಬೈಬಲ್‌

4 ಆ ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯ ಒಡೆದು ನಾಲ್ಕು ದಿಕ್ಕುಗಳಿಗೂ ಸೀಳಿಹೋಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ಪ್ರಬಲವಾಗಿ ಇದ್ದಂತೆ ಅದು ಇನ್ನು ಪ್ರಬಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ [ನಾಲ್ಕು] ಪಾಲಾಗುವದು; ಅದು ಅವನ ಸಂತತಿಗೆ ಭಾಗವಾಗದು, ಅವನ ಆಳಿಕೆಯಲ್ಲಿ ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು; ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಉದಯಿಸಿದ ನಂತರ, ಅವನ ರಾಜ್ಯ ಒಡೆದು ಆಕಾಶದ ನಾಲ್ಕು ದಿಕ್ಕುಗಳಿಗೂ ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಅದು ಇನ್ನು ಪ್ರಬಲವಾಗದು. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಿತ್ತುಕೊಂಡು ಇತರರಿಗೆ ನೀಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:4
24 ತಿಳಿವುಗಳ ಹೋಲಿಕೆ  

ಆ ಕೊಂಬು ಮುರಿಯಿತು; ಅದರ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ನಾಲ್ಕು ಕೊಂಬುಗಳು ನಾಲ್ಕು ರಾಜ್ಯಗಳನ್ನು ಸೂಚಿಸುವವು. ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನ ರಾಷ್ಟ್ರದಿಂದ ಹುಟ್ಟುವವು. ಆದರೆ ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನಷ್ಟು ಶಕ್ತಿಶಾಲಿಯಾಗಿರುವದಿಲ್ಲ.


ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು.


ಯಾವ ಜನಾಂಗವಾದರೂ ನನ್ನ ಸಂದೇಶವನ್ನು ಕೇಳದೆಹೋದರೆ ಅದನ್ನು ಸಂಪೂರ್ಣವಾಗಿ ನಾಶಮಾಡುವೆನು. ಒಣಗಿ ಸತ್ತುಹೋದ ಸಸಿಯಂತೆ ಅದನ್ನು ಕಿತ್ತು ಎಸೆದುಬಿಡುವೆನು.” ಇದು ಯೆಹೋವನಿಂದ ಬಂದ ಸಂದೇಶ.


“ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು.


ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.


ಒಮ್ಮೆ ನಾನು ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕುರಿತು ಮಾತನಾಡುವಾಗ ಆ ಜನಾಂಗವನ್ನು ನಾನು ಖಂಡಿಸುವೆನೆಂದು ಮತ್ತು ಆ ಜನಾಂಗವನ್ನು ನಾನು ನಾಶಪಡಿಸುವೆನೆಂದು ಹೇಳಬಹುದು.


ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಬವನ್ನು ಅದರ ಸ್ವಾಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು.


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.


“ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.


ಯೆರೆಮೀಯನೇ, “ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ.


ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.


ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನ್ನು ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.


ಆಗ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನನ್ನ ಪರವಾಗಿ ಗಾಳಿಯೊಂದಿಗೆ ಮಾತನಾಡು. ನರಪುತ್ರನೇ, ಗಾಳಿಯೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, ‘ಗಾಳಿಯೇ, ಎಲ್ಲಾ ದಿಕ್ಕುಗಳಿಂದ ಬಂದು ಈ ಸತ್ತ ಶರೀರಗಳ ಮೇಲೆ ಊದು. ಅವರ ಮೇಲೆ ಗಾಳಿ ಊದು. ಆಗ ಅವುಗಳಿಗೆ ಜೀವ ಬರುವದು.’”


ಯೆಹೋವನು ಹೀಗೆನ್ನುತ್ತಾನೆ, “ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರಬನ್ನಿರಿ. ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.


ದೇವದೂತನು ಹೇಳಿದ್ದೇನೆಂದರೆ, “ಇವು ನಾಲ್ಕು ಗಾಳಿಗಳು. ಅವು ಭೂಲೋಕದ ಒಡೆಯನ ಬಳಿಯಿಂದ ಈಗ ತಾನೇ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು